ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm