ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm