ಬ್ರೇಕಿಂಗ್ ನ್ಯೂಸ್
15-10-23 03:03 pm Mangaluru Correspodent ಕರಾವಳಿ
ಕಾರ್ಕಳ, ಅ.15: ಪ್ರವಾಸಿ ಕೇಂದ್ರ ಪರಶುರಾಮ ಥೀಮ್ ಪಾರ್ಕ್ ನಲ್ಲಿ ದಿಢೀರ್ ಆಗಿ ಪರುಶುರಾಮ ಮೂರ್ತಿ ಕಾಣೆಯಾಗಿದ್ದು, ಮತ್ತೆ ವಿವಾದಕ್ಕೆ ಒಳಗಾಗಿದೆ. ಎರಡು ದಿನಗಳಿಂದ ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಿರುವುದು ಪತ್ತೆಯಾಗಿತ್ತು. ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಅಸಲಿ ಬಣ್ಣ ಬಯಲಾಗಿದ್ದು, ಪರಶುರಾಮ ಮೂರ್ತಿಯ ಪಾದ ಮತ್ತು ಕಾಲು ಬಿಟ್ಟು ಮೇಲಿನ ಭಾಗ ಮಾಯವಾಗಿರುವುದು ಕಂಡುಬಂದಿದೆ.
ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ನಕಲಿ ಎನ್ನುವ ಬಗ್ಗೆ ಭಾರೀ ಆರೋಪ ಕೇಳಿಬಂದಿತ್ತು. ಇದೀಗ ಮೂರ್ತಿ ನಾಪತ್ತೆ ಆಗುತ್ತಲೇ ಹೋರಾಟಗಾರರು ಮೂರ್ತಿ ಕಾಣೆಯಾಗಿದೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂರ್ತಿ ತೆರವು ಹಿನ್ನೆಲೆಯಲ್ಲಿ ಉಮ್ಮಿಕಲ್ ಬೆಟ್ಟಕ್ಕೆ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಭೇಟಿ ನೀಡಿದ್ದು ಶಾಸಕ ಸುನಿಲ್ ಕುಮಾರ್ ಬಗ್ಗೆ ಆರೋಪ ಮಾಡಿದ್ದಾರೆ.


ಪರಶುರಾಮನ ಕಂಚಿನ ಮೂರ್ತಿಯ ಕಾಲಿನ ಭಾಗ ಮಾತ್ರವಿದ್ದು, ದೇಹದ ಉಳಿದ ಭಾಗ ತೆರವು ಮಾಡಲಾಗಿದೆ. ಜಿಲ್ಲಾ ನಿರ್ಮಿತಿ ಕೇಂದ್ರದ ಮೇಲ್ವಿಚಾರಣೆಯಲ್ಲಿ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಮೂರ್ತಿ ತೆರವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಜನರ ದಿಕ್ಕು ತಪ್ಪಿಸಿ ಕಾಮಗಾರಿ ನಡೆಸುವ ಅಗತ್ಯ ಇಲ್ಲ. ಈ ಬಗ್ಗೆ ಎನ್ಐಟಿಕೆ ಹಾಗೂ ಎಂಐಟಿ ತಂತ್ರಜ್ಞರ ತಂಡ ಅಗಮಿಸಿ ಮೂರ್ತಿಯ ಅಡಿಪಾಯ ಪರಿಶೀಲನೆ ನಡೆಸಬೇಕು ಎಂದು ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಮೂರ್ತಿಯ ಮೇಲಿನ ಭಾಗ ಫೈಬರ್ ನಿಂದ ನಿರ್ಮಾಣ ಮಾಡಲಾಗಿದೆ ಎನ್ನುವ ಮಾತನ್ನು ಹೋರಾಟಗಾರರು ಹೇಳಿಕೊಂಡಿದ್ದರು. ಇದೀಗ ಮೂರ್ತಿಯನ್ನು ತೆರವುಗೊಳಿಸಿ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ನಾನಾ ರೀತಿಯ ಶಂಕೆಗೆ ಕಾರಣವಾಗಿದೆ
Drone footage reveals that Parashuram statue is missing from Theme Park. Viral drone footage released by Congress supporters displayed that, except for the foot and knee of the statue, all other parts of the statue had been removed in the name of project completion. The district administration and the local MLA had previously informed the media that the construction of the theme park was in its final stages and that public access was restricted due to ongoing construction work.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm