ತೊಕ್ಕೊಟ್ಟು: ಜಾನುವಾರು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿದ ಸ್ಥಳೀಯರು, ವಾಹನ ಪೊಲೀಸರ ವಶಕ್ಕೆ

11-11-20 09:44 pm       Mangaluru Correspondent   ಕರಾವಳಿ

ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ಸ್ಥಳೀಯ ಯುವಕರು ಅಡ್ಡಗಟ್ಟಿ ನಿಲ್ಲಿಸಿದ್ದು , ಪೊಲೀಸರು ವಾಹನ ಮತ್ತು ಜಾನುವಾರುಗಳನ್ನ ವಶಕ್ಕೆ ಪಡೆದಿದ್ದಾರೆ. 

ಉಳ್ಳಾಲ ನವಂಬರ್ 11: ಮಂಗಳೂರಿನಿಂದ ಕೇರಳದ ಕಡೆಗೆ ಆರು ಜಾನುವಾರುಗಳನ್ನು (5 ಹೋರಿ ಒಂದು ಹಸು) ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ತೊಕ್ಕೊಟ್ಟಿನ ಕಾಪಿಕಾಡು ಹೆದ್ದಾರಿಯಲ್ಲಿ ಸ್ಥಳೀಯ ಯುವಕರು ಅಡ್ಡಗಟ್ಟಿ ನಿಲ್ಲಿಸಿದ್ದು , ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ವಾಹನ ಮತ್ತು ಜಾನುವಾರುಗಳನ್ನ ವಶಕ್ಕೆ ಪಡೆದಿದ್ದಾರೆ. 

ದಾವಣಗೆರೆ ನೋಂದಣಿಯ ವಾಹನವಾಗಿದ್ದು ಚಾಲಕನು ವಾಹನ ಮತ್ತು ಜಾನುವಾರುಗಳನ್ನು ಹುಬ್ಬಳ್ಳಿಯ ಕೋರ್ಟಿಂದ ಬಿಡುಗಡೆಗೊಳಿಸಿರುವುದಾಗಿ ದಾಖಲೆ ತೋರಿಸಿದ್ದಾನೆ. ಉಳ್ಳಾಲ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಜಾನುವಾರು ಸಾಗಾಟದ  ಬಗ್ಗೆ ಸ್ಥಳೀಯರು ಅನುಮಾನ ಪಟ್ಟಿದ್ದು, ಸ್ಥಳದಲ್ಲಿ ಕೆಲ ಕಾಲ ಜನ ಜಮಾವಣೆಗೊಂಡು ಪೊಲೀಸರು ಜನರನ್ನು ಚದುರಿಸಿದ್ದಾರೆ. ಉಳ್ಳಾಲ ಪೊಲೀಸರ ವಿಚಾರಣೆಯಲ್ಲಿ ಸತ್ಯಾಂಶ ಹೊರಬರಲಿದೆ.

A tempo that was illegally transporting cattle was held by public near Thokottu, Mangalore. The Ullal police have seized the Tempo and taken driver into custody for enquiry.