ಬ್ರೇಕಿಂಗ್ ನ್ಯೂಸ್
16-10-23 05:31 pm Mangalore Correspondent ಕರಾವಳಿ
ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.
Cyclone Brewing in Arabian Sea heavy rains expected in Mangalore for the next two days. A low-pressure area could form in Arabian Sea by tonight, that may eventually give gateway to the first post-monsoon cyclone. While it is too early for any concrete forecast, weather models are predicting that conditions are building up over the southeastern parts of the Arabian Sea of a cyclonic circulation.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm