ಬ್ರೇಕಿಂಗ್ ನ್ಯೂಸ್
17-10-23 10:22 pm Mangalore Correspondent ಕರಾವಳಿ
ಮಂಗಳೂರು, ಅ.17: ದಸರಾ ಉತ್ಸವ ಸಮಯದಲ್ಲಿ ಕೊರಗ ಜನಾಂಗದ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆ ಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು ನಿಷೇಧಿಸಲಾಗಿದೆ.
ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿ ಚೂರು, ಮುಳ್ಳು ಮುಂತಾದವು ಇರುವ ಬಗ್ಗೆ, ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿಸಿ ಸೀಮಂತ ಹೆಣ್ಣಿನ ಮೇಲಿರುವ ದೃಷ್ಟಿ ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಈ ರೀತಿಯ ಚಟುವಟಿಕೆಗಳು ಕೊರಗರ ಅಜಲು ಪದ್ಧತಿ ನಿಷೇಧ ಕಾಯಿದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. 5ರಿಂದ 6 ವರ್ಷಗಳ ವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು. ಇಂತಹ ಪ್ರಸಂಗ ಪತ್ತೆಯಾದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ವಿವಿಧ ರೀತಿಯ ವೇಷಗಳನ್ನು ಹಾಕಿ ಕುಣಿಯುವುದು ಸಂಪ್ರದಾಯದ ನೆಲೆಯಲ್ಲಿ ನಡೆದುಬಂದಿದೆ. ಕೊರಗ ವೇಷ ನಿಷೇಧ ಇದ್ದರೂ ಕೆಲವು ಹಳ್ಳಿಗಳಲ್ಲಿ ಹರಕೆ ನೆಪದಲ್ಲಿ ಇಂತಹ ವೇಷಗಳನ್ನು ಹಾಕುವುದನ್ನು ಮುಂದುವರಿಸಲಾಗಿದೆ.
The acts of donning Koraga tribe costume, dancing in front of shops and homes, abusing the caste during Dasara and putting finger nails and hair in food and giving the same to women of Koraga community during Amavasya are prohibited.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm