ಬ್ರೇಕಿಂಗ್ ನ್ಯೂಸ್
17-10-23 10:22 pm Mangalore Correspondent ಕರಾವಳಿ
ಮಂಗಳೂರು, ಅ.17: ದಸರಾ ಉತ್ಸವ ಸಮಯದಲ್ಲಿ ಕೊರಗ ಜನಾಂಗದ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆ ಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು ನಿಷೇಧಿಸಲಾಗಿದೆ.
ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿ ಚೂರು, ಮುಳ್ಳು ಮುಂತಾದವು ಇರುವ ಬಗ್ಗೆ, ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿಸಿ ಸೀಮಂತ ಹೆಣ್ಣಿನ ಮೇಲಿರುವ ದೃಷ್ಟಿ ತೆಗೆಯಲು ಬಳಸಿಕೊಳ್ಳುವುದು ನಿಷೇಧಿಸಲಾಗಿದೆ.
ಈ ರೀತಿಯ ಚಟುವಟಿಕೆಗಳು ಕೊರಗರ ಅಜಲು ಪದ್ಧತಿ ನಿಷೇಧ ಕಾಯಿದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. 5ರಿಂದ 6 ವರ್ಷಗಳ ವರೆಗೆ ಕಾರಾಗೃಹವಾಸ ಮತ್ತು 5000 ರೂ. ದಂಡ ವಿಧಿಸಲಾಗುವುದು. ಇಂತಹ ಪ್ರಸಂಗ ಪತ್ತೆಯಾದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ವಿವಿಧ ರೀತಿಯ ವೇಷಗಳನ್ನು ಹಾಕಿ ಕುಣಿಯುವುದು ಸಂಪ್ರದಾಯದ ನೆಲೆಯಲ್ಲಿ ನಡೆದುಬಂದಿದೆ. ಕೊರಗ ವೇಷ ನಿಷೇಧ ಇದ್ದರೂ ಕೆಲವು ಹಳ್ಳಿಗಳಲ್ಲಿ ಹರಕೆ ನೆಪದಲ್ಲಿ ಇಂತಹ ವೇಷಗಳನ್ನು ಹಾಕುವುದನ್ನು ಮುಂದುವರಿಸಲಾಗಿದೆ.
The acts of donning Koraga tribe costume, dancing in front of shops and homes, abusing the caste during Dasara and putting finger nails and hair in food and giving the same to women of Koraga community during Amavasya are prohibited.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm