ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm