ಬ್ರೇಕಿಂಗ್ ನ್ಯೂಸ್
18-10-23 06:32 pm Mangalore Correspondent ಕರಾವಳಿ
ಮಂಗಳೂರು, ಅ.18: ಮಂಗಳಾದೇವಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮ್ ವ್ಯಾಪಾರಸ್ಥರನ್ನು ದ್ವೇಷಿಸುವ ರೀತಿಯ ವಿಶ್ವ ಹಿಂದು ಪರಿಷತ್, ಬಜರಂಗದಳ ಮುಖಂಡರ ನಡೆಯ ಬಗ್ಗೆ ಜಾತ್ಯತೀತ ಪಕ್ಷಗಳ ಸಂಘಟನೆಯ ನಾಯಕರು ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅವರಿಗೆ ದೂರು ನೀಡಿದ್ದಾರೆ.
ಧರ್ಮದ ವಿಚಾರದಲ್ಲಿ ದ್ವೇಷ ಮೂಡಿಸಿ, ಜನರನ್ನು ಎತ್ತಿಕಟ್ಟುವ ಪ್ರಯತ್ನವನ್ನು ಶರಣ್ ಪಂಪ್ವೆಲ್ ಮತ್ತು ಗ್ಯಾಂಗ್ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಕಾನೂನು ಉಲ್ಲಂಘನೆಯಾಗಿದ್ದು ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ನಾಯಕರು ಒತ್ತಾಯಿಸಿದ್ದಾರೆ. ಒಂದು ಸಮುದಾಯವನ್ನು ಬಹಿಷ್ಕರಿಸಲು ಕರೆ ನೀಡುವುದು ಜಾಮೀನು ರಹಿತ ಅಪರಾಧವಾಗಿದೆ. ಈ ವಿಚಾರದಲ್ಲಿ ಕಾನೂನು ಪಾಲಿಸುವ ಪೊಲೀಸರು ಲಘುವಾಗಿ ಪರಿಗಣಿಸಬಾರದು. ಮೃದು ಧೋರಣೆ ತೋರುವುದು ಜನಸಾಮಾನ್ಯರಲ್ಲಿ ಶಾಂತಿ ಕದಡುವ ಆತಂಕಕ್ಕೆ ಕಾರಣವಾಗಿದೆ ಎಂದು ಸಚಿವರ ಗಮನಕ್ಕೆ ತಂದಿದ್ದಾರೆ.


ಇದೇ ವಿಚಾರದಲ್ಲಿ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುನೀರ್ ಕಾಟಿಪಳ್ಳ, ಮುಸ್ಲಿಮರು ವ್ಯಾಪಾರ ಮಾಡಬಾರದು, ಅವರನ್ನು ಬಹಿಷ್ಕರಿಸಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಶರಣ್ ಪಂಪ್ವೆಲ್ ವಿರುದ್ಧ ಪೊಲೀಸ್ ಇಲಾಖೆ ಮಂಡಿಯೂರಿದಂತೆ ವರ್ತಿಸುತ್ತಿದೆ. ಮಂಗಳಾದೇವಿಯಲ್ಲಿ ಮಾತ್ರ ನವರಾತ್ರಿ ಉತ್ಸವ ನಡೆಯುವುದಲ್ಲ. ಕುದ್ರೋಳಿ, ಉರ್ವಾ ಸೇರಿ ಹಲವು ಕಡೆ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವ ನಡೆಯುತ್ತದೆ. ಯಾಕೆ ಇವರು ಹೋಗಿ ಅಲ್ಲಿ ತಡೆ ಹಾಕುವುದಿಲ್ಲ. ಕುದ್ರೋಳಿಗೆ ಹೋದರೆ ಕೋಟಿ ಚೆನ್ನಯರನ್ನು ನಂಬುವವರು ಇವರನ್ನು ಓಡಿಸುತ್ತಾರೆಂಬ ಭಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇವರಿಗೆ ಚುನಾವಣೆ ಗೆಲ್ಲಲು ಧರ್ಮದ ಮೂಲಕ ರಾಜಕೀಯ ಮಾಡುವುದಷ್ಟೇ ಗೊತ್ತು. ಮುಂದಿನ ಲೋಕಸಭೆ ಚುನಾವಣೆ ಗೆಲ್ಲಲು ನಳಿನ್ ಕುಮಾರ್ ಗೆ ಅಭಿವೃದ್ಧಿ ಬಗ್ಗೆ ಹೇಳಲು ಯಾವುದೇ ವಿಚಾರ ಇಲ್ಲ. ಹೆದ್ದಾರಿ, ರೈಲ್ವೇ, ಎನ್ಎಂಪಿಟಿ, ಎಂಆರ್ ಪಿಎಲ್ ಹೀಗೆ ಯಾವುದರಲ್ಲೂ ಜನಪರ ಕೆಲಸ ಮಾಡಿಲ್ಲ. ಹೇಳಿಕೊಳ್ಳಲು ಇವರ ಸಾಧನೆಯೇ ಇಲ್ಲ. ಇದಕ್ಕಾಗಿ ವೇದವ್ಯಾಸ ಕಾಮತ್, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರು ಶರಣ್ ಪಂಪ್ವೆಲ್ ಮತ್ತು ಗ್ಯಾಂಗನ್ನು ಛೂಬಿಟ್ಟಿದ್ದಾರೆ. ಬಡವರ ರಕ್ತಹರಿಸಿ ಚುನಾವಣೆ ಗೆಲ್ಲಲು ಯೋಜನೆ ಹಾಕಿದ್ದಾರೆ. ಮತ್ತೆ ಧರ್ಮದ ಹೆಸರಲ್ಲಿ ಗುಲ್ಲೆಬ್ಬಿಸಿ ರಕ್ತಪಾತಕ್ಕೆ ನೋಡುತ್ತಿದ್ದಾರೆ. ಆಮೂಲಕ ಚುನಾವಣೆ ಗೆಲ್ಲಲು ಪ್ಲಾನ್ ಮಾಡುತ್ತಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Complaint issued against sharan pumpwell over Mangaladevi temple Fair to Muslims to Dinesh Gundurao.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm