ಬ್ರೇಕಿಂಗ್ ನ್ಯೂಸ್
18-10-23 07:58 pm Mangalore Correspondent ಕರಾವಳಿ
ಮಂಗಳೂರು, ಅ.18: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ.
ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಇವರು ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ನುಗ್ಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ನೇರವಾಗಿ ರಸ್ತೆಯಿಂದ ಹೊರಗೆ ಬಂದಿದ್ದು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ಯುವತಿಯರ ಮೇಲೆರಗಿದೆ. ಒಬ್ಬಳು ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರೆ, ಇತರ ನಾಲ್ಕು ಮಂದಿಯೂ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.



ಕಾರು ಸಂಪೂರ್ಣ ಚಾಲಕನ ನಿಯಂತ್ರಣ ಇಲ್ಲದ ರೀತಿ ಹುಡುಗಿಯರ ಮೇಲೆ ಹರಿದಿದ್ದು ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ನಾಲ್ಕು ಹುಡುಗಿಯರಿಗೆ ಡಿಕ್ಕಿಯಾದ ಬಳಿಕ ರಸ್ತೆ ದಾಟುತ್ತಿದ್ದ ಇನ್ನೊಬ್ಬ ಮಹಿಳೆಗೂ ಡಿಕ್ಕಿಯಾಗಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಅಪಘಾತದ ಬಳಿಕ ಕಾರನ್ನು ನಿಲ್ಲಿಸದೆ, ಮಣ್ಣಗುಡ್ಡದ ಮನೆಗೆ ತೆರಳಿದ್ದ. ಮನೆಗೆ ಹೋಗಿ ತಂದೆಯ ಜೊತೆಗೆ ಪಾಂಡೇಶ್ವರ ಠಾಣೆಗೆ ಆಗಮಿಸಿದ್ದ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Mangalore Mannagudda accident, girls dies on spot after car rams her on the divider. The video of this has gone viral social media. The girls were on their way to the bus stand after visiting the kudroli temple for dasara.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm