ಬ್ರೇಕಿಂಗ್ ನ್ಯೂಸ್
18-10-23 07:58 pm Mangalore Correspondent ಕರಾವಳಿ
ಮಂಗಳೂರು, ಅ.18: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ.
ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಇವರು ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ನುಗ್ಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ನೇರವಾಗಿ ರಸ್ತೆಯಿಂದ ಹೊರಗೆ ಬಂದಿದ್ದು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ಯುವತಿಯರ ಮೇಲೆರಗಿದೆ. ಒಬ್ಬಳು ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರೆ, ಇತರ ನಾಲ್ಕು ಮಂದಿಯೂ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.



ಕಾರು ಸಂಪೂರ್ಣ ಚಾಲಕನ ನಿಯಂತ್ರಣ ಇಲ್ಲದ ರೀತಿ ಹುಡುಗಿಯರ ಮೇಲೆ ಹರಿದಿದ್ದು ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ನಾಲ್ಕು ಹುಡುಗಿಯರಿಗೆ ಡಿಕ್ಕಿಯಾದ ಬಳಿಕ ರಸ್ತೆ ದಾಟುತ್ತಿದ್ದ ಇನ್ನೊಬ್ಬ ಮಹಿಳೆಗೂ ಡಿಕ್ಕಿಯಾಗಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಅಪಘಾತದ ಬಳಿಕ ಕಾರನ್ನು ನಿಲ್ಲಿಸದೆ, ಮಣ್ಣಗುಡ್ಡದ ಮನೆಗೆ ತೆರಳಿದ್ದ. ಮನೆಗೆ ಹೋಗಿ ತಂದೆಯ ಜೊತೆಗೆ ಪಾಂಡೇಶ್ವರ ಠಾಣೆಗೆ ಆಗಮಿಸಿದ್ದ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Mangalore Mannagudda accident, girls dies on spot after car rams her on the divider. The video of this has gone viral social media. The girls were on their way to the bus stand after visiting the kudroli temple for dasara.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm