ಬ್ರೇಕಿಂಗ್ ನ್ಯೂಸ್
18-10-23 07:58 pm Mangalore Correspondent ಕರಾವಳಿ
ಮಂಗಳೂರು, ಅ.18: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ.
ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಇವರು ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ನುಗ್ಗಿ ಬಂದ ಕಾರು ಡಿಕ್ಕಿಯಾಗಿದೆ. ಕಾರು ನೇರವಾಗಿ ರಸ್ತೆಯಿಂದ ಹೊರಗೆ ಬಂದಿದ್ದು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ಯುವತಿಯರ ಮೇಲೆರಗಿದೆ. ಒಬ್ಬಳು ಯುವತಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದರೆ, ಇತರ ನಾಲ್ಕು ಮಂದಿಯೂ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.



ಕಾರು ಸಂಪೂರ್ಣ ಚಾಲಕನ ನಿಯಂತ್ರಣ ಇಲ್ಲದ ರೀತಿ ಹುಡುಗಿಯರ ಮೇಲೆ ಹರಿದಿದ್ದು ಅಪಘಾತದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ನಾಲ್ಕು ಹುಡುಗಿಯರಿಗೆ ಡಿಕ್ಕಿಯಾದ ಬಳಿಕ ರಸ್ತೆ ದಾಟುತ್ತಿದ್ದ ಇನ್ನೊಬ್ಬ ಮಹಿಳೆಗೂ ಡಿಕ್ಕಿಯಾಗಿದೆ.
ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಅಪಘಾತದ ಬಳಿಕ ಕಾರನ್ನು ನಿಲ್ಲಿಸದೆ, ಮಣ್ಣಗುಡ್ಡದ ಮನೆಗೆ ತೆರಳಿದ್ದ. ಮನೆಗೆ ಹೋಗಿ ತಂದೆಯ ಜೊತೆಗೆ ಪಾಂಡೇಶ್ವರ ಠಾಣೆಗೆ ಆಗಮಿಸಿದ್ದ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಸ್ಥಳೀಯರು ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Mangalore Mannagudda accident, girls dies on spot after car rams her on the divider. The video of this has gone viral social media. The girls were on their way to the bus stand after visiting the kudroli temple for dasara.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm