ಬ್ರೇಕಿಂಗ್ ನ್ಯೂಸ್
20-10-23 07:45 pm Udupi Correspondent ಕರಾವಳಿ
ಉಡುಪಿ, ಅ.20: ಅವರಿಬ್ಬರು ಸೋದರರು ದೇಶದ ಅಗ್ರಗಣ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿದವರು. ಉಡುಪಿ ಮೂಲದ ಇಬ್ಬರು ಸೋದರರೂ ಈಗ ಕೇವಲ ಏಳು ಗಂಟೆಗಳ ಅಂತರದಲ್ಲಿ ಜೊತೆಯಾಗಿಯೇ ಇಹಲೋಕ ತ್ಯಜಿಸಿ ಸುದ್ದಿಯಾಗಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಐಡಿಬಿಐ ಬ್ಯಾಂಕ್ ನಲ್ಲಿ ಜನರಲ್ ಮೆನೇಜರ್ ಆಗಿ ನಿವೃತ್ತರಾಗಿದ್ದ ಉಡುಪಿ ಅನಂತಪದ್ಮನಾಭ ಆಚಾರ್ಯ (90) ಮತ್ತು ಮಹಾರಾಷ್ಟ್ರ ರಾಜ್ಯದ ನಿವೃತ್ತ ಪ್ರಧಾನ ಅಕೌಂಟೆಂಟ್ ಜನರಲ್ ಉಡುಪಿ ಶ್ರೀನಿವಾಸ ಆಚಾರ್ಯ (88) ಅ.18 ಮತ್ತು ಅ.19ರಂದು ನಿಧನರಾಗಿದ್ದಾರೆ.
ಅನಂತ ಆಚಾರ್ಯ ರಾಣೆಬೆನ್ನೂರಿನಲ್ಲಿ ಕಾರ್ಪೊರೇಶನ್ ಬ್ಯಾಂಕ್ ಉದ್ಯೋಗಿಯಾಗಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸೇರಿದ್ದು ಆನಂತರ ಆರ್ಬಿಐನಲ್ಲಿಯೂ ಸೇವೆ ಸಲ್ಲಿಸಿದ್ದರು. ಮುಂಬಯಿ, ದಿಲ್ಲಿ, ಜೈಪುರ, ಲಕ್ನೋದಲ್ಲಿ ಸೇವೆಯಲ್ಲಿದ್ದ ಆಚಾರ್ಯರು ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಮತ್ತು ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಐಡಿಬಿಐ)ದಲ್ಲಿ ಜನರಲ್ ಮೆನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ನಿವೃತ್ತಿ ಬಳಿಕ ಮಣಿಪಾಲದ ರಾಹುಲ್ ನಗರದಲ್ಲಿ ನೆಲೆಸಿದ್ದರು. ಕೃಷಿ, ಕರ್ನಾಟಕ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಶ್ರೀನಿವಾಸ ಆಚಾರ್ಯರು ಸೆಂಟ್ರಲ್ ರೈಲ್ವೇ ಇಲಾಖೆಗೆ ಉದ್ಯೋಗಿಯಾಗಿ ಸೇರಿದ್ದು ಬಳಿಕ ನಾಗರಿಕ ಸೇವೆಗೆ ಸೇರಿದ್ದರು. ಮುಂಬೈಯಲ್ಲಿ ಸಹಾಯಕ ಅಕೌಂಟೆಂಟ್ ಜನರಲ್, ಮಣಿಪುರ ರಾಜ್ಯದ ಮೊದಲ ಉಪ ಅಕೌಂಟೆಂಟ್ ಜನರಲ್ ಆಗಿದ್ದರು. ಮಣಿಪುರ, ಕೇರಳ, ತಮಿಳುನಾಡು, ಕರ್ನಾಟಕ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ದಿಲ್ಲಿಯ ಕೈಗಾರಿಕ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದರು. ಸ್ಟೇಟ್ ಟ್ರೇಡಿಂಗ್ ಕಾರ್ಪೊರೇಶನ್, ಕರ್ನಾಟಕ ಪವರ್ ಕಾರ್ಪೊರೇಶನ್ ಹಣಕಾಸು ನಿರ್ದೇಶಕ, ಬನಾರಸ್ ಹಿಂದು ವಿ.ವಿ. ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮಹಾರಾಷ್ಟ್ರ ರಾಜ್ಯದ ಪ್ರಧಾನ ಅಕೌಂಟೆಂಟ್ ಜನರಲ್ ಆಗಿ ನಿವೃತ್ತರಾಗಿದ್ದರು.
ಉಡುಪಿ ಕುಂಜಿಬೆಟ್ಟಿನಲ್ಲಿ ನೆಲೆಸಿದ್ದ ಆಚಾರ್ಯರು ದತ್ತಿ ಸಂಸ್ಥೆಗಳಿಗೆ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಪರಿಸರ- ಪ್ರಾಣಿದಯಾ ಸಂಸ್ಥೆಗಳಿಗೆ ನೆರವು ನೀಡುತ್ತಿದ್ದರು. ಮೃತರು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
In a shocking incident, two brothers died within a span of a day in Udupi. Udupi Ananthapadmanabha Acharya (90), retired General Manager of Reserve Bank of India (RBI), IDBI Bank and Udupi Srinivas Acharya (88), retired Chief Accountant General of Maharashtra State, are the brothers who passed away on October 19 and October 18 respectively.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm