ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm