ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm