ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm