ಬ್ರೇಕಿಂಗ್ ನ್ಯೂಸ್
21-10-23 05:18 pm Mangalore Correspondent ಕರಾವಳಿ
ಮಂಗಳೂರು, ಅ.21: ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ವಿಭಾಗದ ಉಪ ನಿರ್ದೇಶಕಿಯಾಗಿರುವ ಮಹಿಳಾ ಅಧಿಕಾರಿ ಲಾಕ್ ಆಗಿದ್ದಾರೆ. ದಕ್ಷಿಣ ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ.
2023ರ ಆಗಸ್ಟ್ 31ರಂದು ವಲಯ ಅರಣ್ಯ ಅಧಿಕಾರಿಯಾಗಿ ನಿವೃತ್ತರಾಗಿದ್ದ ಪರಮೇಶ್ ಎನ್.ಪಿ ಎಂಬವರು ಈ ಪ್ರಕರಣದಲ್ಲಿ ದೂರುದಾರರು. ಇವರು ನಿವೃತ್ತಿ ಆಗೋದಕ್ಕೂ ಮುನ್ನ ಕೃಷಿ ಇಲಾಖೆ, ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ನಿಯೋಜನೆ ಮೇಲೆ ಕೆಲಸ ಮಾಡಿದ್ದರು. ಇವರು ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ 2022-23 ಮತ್ತು 24ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬಂಟ್ವಾಳ ತಾಲೂಕಿನ ಸಜಿಪ ನಡು, ಸಜಿಪ ಮುನ್ನೂರು, ಸಜಿಪ ಮೂಡ, ಕುರ್ನಾಡು, ನರಿಂಗಾನ, ಬಾಳೆಪುಣಿ, ಮಂಜನಾಡಿ ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ 50 ಲಕ್ಷ ಮೌಲ್ಯದ ಸಸಿಗಳನ್ನು ವಿತರಣೆ ಮಾಡಿದ್ದರು.
ಇದಕ್ಕಾಗಿ ತೋಟಗಾರಿಕಾ ಸಸಿಗಳನ್ನು ಕಣ್ಣನ್ ನರ್ಸರಿ ಮಾಲಕರಾದ ಧೋರಿ ಮತ್ತು ಶಬರೀಶ್ ನರ್ಸರಿಯ ಭೈರೇ ಗೌಡ ಎಂಬವರಿಂದ ಖರೀದಿಸಿದ್ದು, ಅವರಿಗೆ 18 ಲಕ್ಷ ಮೊತ್ತ ನೀಡಬೇಕಾಗಿತ್ತು. ಇದಲ್ಲದೆ, ಅರಣ್ಯ ಗುತ್ತಿಗೆದಾರರಿಂದ ನಾಟಿ ಮಾಡಿಸಿದ್ದ ಸಸಿಗಳ ಮೊತ್ತ 32 ಲಕ್ಷ ಬಿಲ್ ಬಾಕಿಯಿತ್ತು. ಮುಂಗಡ ಸಸಿಗಳನ್ನು ಪಡೆದು ನಾಟಿ ಮಾಡಿದ್ದು, ಸರಕಾರದಿಂದ ಹಣ ಬಾರದೆ ಹಣ ಪಾವತಿಯಾಗದೆ ಬಾಕಿ ಉಳಿದಿತ್ತು. ಈ ಹಣವನ್ನು ನೀಡುವರೇ ನರ್ಸರಿ ಮಾಲಕರು ಕೇಳುತ್ತಿದ್ದುದರಿಂದ ನಿವೃತ್ತ ಅಧಿಕಾರಿ ಪರಮೇಶ್ ಬಿಲ್ ಪಾಸ್ ಮಾಡುವಂತೆ ಮಂಗಳೂರು ವಿಭಾಗದ ಕೃಷಿ ನಿರ್ದೇಶಕಿ ಭಾರತಮ್ಮ ಅವರಲ್ಲಿ ಕೇಳಿಕೊಂಡಿದ್ದರು. ಬಿಲ್ ಪಾಸ್ ಮಾಡಿಸಲು ಒಟ್ಟು ಮೊತ್ತದ 15 ಶೇಕಡಾ ಲಂಚ ನೀಡಬೇಕೆಂದು ಭಾರತಮ್ಮ ಬೇಡಿಕೆ ಇರಿಸಿದ್ದರು.
ಈ ಬಗ್ಗೆ ಅ.20ರಂದು ಪರಮೇಶ್, ಕೃಷಿ ನಿರ್ದೇಶಕಿ ಭಾರತಮ್ಮ ಅವರ ಕಚೇರಿಗೆ ತೆರಳಿದಾಗ ಒಂದು ಲಕ್ಷ ರೂ. ಲಂಚ ಮೊದಲು ನೀಡುವಂತೆ ಕೇಳಿಕೊಂಡಿದ್ದರು. ಅಧಿಕಾರಿಯ ಭ್ರಷ್ಟಾಚಾರದ ಬಗ್ಗೆ ಪರಮೇಶ್, ಲೋಕಾಯುಕ್ತ ಗಮನಕ್ಕೆ ತಂದಿದ್ದು ಅವರ ಸೂಚನೆಯಂತೆ ಶನಿವಾರ ಒಂದು ಲಕ್ಷ ರೂ. ಲಂಚ ನೀಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ ಮಹಿಳಾ ಅಧಿಕಾರಿ ಭಾರತಮ್ಮ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಹಣವನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜು, ಕಲಾವತಿ, ಇನ್ಸ್ ಪೆಕ್ಟರ್ ಸುರೇಶ್ ಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
Mangalore Assistant Director of Agriculture Bharatamma arrested by Lokayukta over bribe.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm