ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm