ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm