ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm