ಬ್ರೇಕಿಂಗ್ ನ್ಯೂಸ್
22-10-23 10:22 pm Mangaluru Correspondent ಕರಾವಳಿ
ಮಂಗಳೂರು, ಅ.22: ವಾಮಂಜೂರಿನ ಪಿಲಿಕುಳದ ಬಳಿ 2019ರಿಂದ ಕಾರ್ಯ ನಿರ್ವಹಿಸುತ್ತಿರುವ ವೈಟ್ ಗ್ರೋವ್ ಹೆಸರಿನ ಅಣಬೆ ಉತ್ಪಾದನೆ ಕೇಂದ್ರದ ಬಗ್ಗೆ ರಾಜಕೀಯ ಪ್ರೇರಿತವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಅದರ ಮಾಲಕರು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಶಾಸಕ ಜೆ.ಆರ್ ಲೋಬೊ ವೈಟ್ ಗ್ರೋವ್ ಸಂಸ್ಥೆಯಲ್ಲಿ ಪಾಲುದಾರಿಕೆ ಹೊಂದಿದ್ದು ಸಾರ್ವಜನಿಕವಾಗಿ ಗುರುತಿಸಿಕೊಂಡಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರದ ಸಣ್ಣ ಕೈಗಾರಿಕಾ ಸಚಿವಾಲಯದಲ್ಲಿ ಮೈಕ್ರೋ ಯೂನಿಟ್ ಎಂದು ನೋಂದಣಿ ಮಾಡಿ ಆರಂಭಿಸಲಾಗಿತ್ತು. ಕೇಂದ್ರದಲ್ಲಿ ಅಣಬೆ ಕೃಷಿ ಜೊತೆಗೆ ತೋಟಗಾರಿಕೆ ಕೆಲಸವನ್ನೂ ಎರಡು ವರ್ಷಗಳಿಂದ ಮಾಡಿಕೊಂಡಿದ್ದಾರೆ.
ಇದಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದಿದ್ದಾರೆ. ಆರಂಭದ ಎರಡು ವರ್ಷ ಕಾಲ ಯಾವುದೇ ಆಕ್ಷೇಪ ಇಲ್ಲದೆ ಅಣಬೆ ಕೃಷಿ ನಡೆದು ಬಂದಿದ್ದು 2023ರ ಫೆಬ್ರವರಿ ತಿಂಗಳಲ್ಲಿ ದಿಢೀರ್ ಆಗಿ ರಾಜಕೀಯ ಪ್ರೇರಿತವಾಗಿ ಕೆಲವರು ದುರ್ವಾಸನೆ ಬರುತ್ತಿರುವ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ರಾಸಾಯನಿಕ ಬಳಸುತ್ತಿದ್ದಾರೆ ಎಂದು ಗುಲ್ಲು ಎಬ್ಬಿಸಿದ್ದಾರೆ. ಈ ಬಗ್ಗೆ ತಜ್ಞರ ಸಮಿತಿಯಿಂದ ವರದಿ ಪಡೆದ ಜಿಲ್ಲಾಧಿಕಾರಿಯವರು ಗೊಬ್ಬರ ಮುಚ್ಚುವ ಆದೇಶ ಹಿಂಪಡೆದು ಕಾಂಪೋಸ್ಟ್ ಮಾಡುವಂತೆ ಸೂಚಿಸಿದ್ದರು.
ಅದರಂತೆ ಅಣಬೆ ಕೃಷಿ ಮತ್ತೆ ಆರಂಭಿಸಿದ್ದರೂ, ಒಂದು ಗುಂಪು ಸುಳ್ಳು ಮತ್ತು ಮಾನಹಾನಿಕರ ಸುದ್ದಿಗಳನ್ನು ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ವಾಟ್ಸಾಪ್, ಫೇಸ್ಬುಕ್, ಯೂಟ್ಯೂಬ್, ಇನ್ಸ್ ಟಾ ಗ್ರಾಮ್ ಗಳಲ್ಲಿ ಸಂದೇಶ ಹರಡುತ್ತಿದ್ದಾರೆ. ನಮ್ಮ ಅಣಬೆ ಘಟಕದ ಚಟುವಟಿಕೆಗಳಿಂದ ಯಾವುದೇ ಕೆಟ್ಟ ವಾಸನೆ ಉತ್ಪತ್ತಿಯಾಗುವುದಿಲ್ಲ. ಉದ್ದೇಶಪೂರ್ವಕ ಸುಳ್ಳು ಸುದ್ದಿಗಳನ್ನು ಹರಿಯಬಿಡುತ್ತಿದ್ದು ಮುಗ್ಧ ಜನರು ಅದನ್ನು ನಂಬಿ ಉದ್ರಿಕ್ತ ಪರಿಸ್ಥಿತಿ ತಲೆದೋರುವಂತೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
The foul smell from the White Grove Agri mushroom factory at Vamanjoor is false, says MD and former MLA JR Lobo in Mangalore, who now has filed a police complaint. Residents of Vamanjoor raised a complaint against Whitegrove Agri LLP over the foul smell and how children have been affected and hospitalized.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm