ಬ್ರೇಕಿಂಗ್ ನ್ಯೂಸ್
22-10-23 10:22 pm Mangaluru Correspondent ಕರಾವಳಿ
ಮಂಗಳೂರು, ಅ.22: ವಾಮಂಜೂರಿನ ಪಿಲಿಕುಳದ ಬಳಿ 2019ರಿಂದ ಕಾರ್ಯ ನಿರ್ವಹಿಸುತ್ತಿರುವ ವೈಟ್ ಗ್ರೋವ್ ಹೆಸರಿನ ಅಣಬೆ ಉತ್ಪಾದನೆ ಕೇಂದ್ರದ ಬಗ್ಗೆ ರಾಜಕೀಯ ಪ್ರೇರಿತವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಅದರ ಮಾಲಕರು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಶಾಸಕ ಜೆ.ಆರ್ ಲೋಬೊ ವೈಟ್ ಗ್ರೋವ್ ಸಂಸ್ಥೆಯಲ್ಲಿ ಪಾಲುದಾರಿಕೆ ಹೊಂದಿದ್ದು ಸಾರ್ವಜನಿಕವಾಗಿ ಗುರುತಿಸಿಕೊಂಡಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರದ ಸಣ್ಣ ಕೈಗಾರಿಕಾ ಸಚಿವಾಲಯದಲ್ಲಿ ಮೈಕ್ರೋ ಯೂನಿಟ್ ಎಂದು ನೋಂದಣಿ ಮಾಡಿ ಆರಂಭಿಸಲಾಗಿತ್ತು. ಕೇಂದ್ರದಲ್ಲಿ ಅಣಬೆ ಕೃಷಿ ಜೊತೆಗೆ ತೋಟಗಾರಿಕೆ ಕೆಲಸವನ್ನೂ ಎರಡು ವರ್ಷಗಳಿಂದ ಮಾಡಿಕೊಂಡಿದ್ದಾರೆ.
ಇದಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದಿದ್ದಾರೆ. ಆರಂಭದ ಎರಡು ವರ್ಷ ಕಾಲ ಯಾವುದೇ ಆಕ್ಷೇಪ ಇಲ್ಲದೆ ಅಣಬೆ ಕೃಷಿ ನಡೆದು ಬಂದಿದ್ದು 2023ರ ಫೆಬ್ರವರಿ ತಿಂಗಳಲ್ಲಿ ದಿಢೀರ್ ಆಗಿ ರಾಜಕೀಯ ಪ್ರೇರಿತವಾಗಿ ಕೆಲವರು ದುರ್ವಾಸನೆ ಬರುತ್ತಿರುವ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ರಾಸಾಯನಿಕ ಬಳಸುತ್ತಿದ್ದಾರೆ ಎಂದು ಗುಲ್ಲು ಎಬ್ಬಿಸಿದ್ದಾರೆ. ಈ ಬಗ್ಗೆ ತಜ್ಞರ ಸಮಿತಿಯಿಂದ ವರದಿ ಪಡೆದ ಜಿಲ್ಲಾಧಿಕಾರಿಯವರು ಗೊಬ್ಬರ ಮುಚ್ಚುವ ಆದೇಶ ಹಿಂಪಡೆದು ಕಾಂಪೋಸ್ಟ್ ಮಾಡುವಂತೆ ಸೂಚಿಸಿದ್ದರು.
ಅದರಂತೆ ಅಣಬೆ ಕೃಷಿ ಮತ್ತೆ ಆರಂಭಿಸಿದ್ದರೂ, ಒಂದು ಗುಂಪು ಸುಳ್ಳು ಮತ್ತು ಮಾನಹಾನಿಕರ ಸುದ್ದಿಗಳನ್ನು ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ವಾಟ್ಸಾಪ್, ಫೇಸ್ಬುಕ್, ಯೂಟ್ಯೂಬ್, ಇನ್ಸ್ ಟಾ ಗ್ರಾಮ್ ಗಳಲ್ಲಿ ಸಂದೇಶ ಹರಡುತ್ತಿದ್ದಾರೆ. ನಮ್ಮ ಅಣಬೆ ಘಟಕದ ಚಟುವಟಿಕೆಗಳಿಂದ ಯಾವುದೇ ಕೆಟ್ಟ ವಾಸನೆ ಉತ್ಪತ್ತಿಯಾಗುವುದಿಲ್ಲ. ಉದ್ದೇಶಪೂರ್ವಕ ಸುಳ್ಳು ಸುದ್ದಿಗಳನ್ನು ಹರಿಯಬಿಡುತ್ತಿದ್ದು ಮುಗ್ಧ ಜನರು ಅದನ್ನು ನಂಬಿ ಉದ್ರಿಕ್ತ ಪರಿಸ್ಥಿತಿ ತಲೆದೋರುವಂತೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
The foul smell from the White Grove Agri mushroom factory at Vamanjoor is false, says MD and former MLA JR Lobo in Mangalore, who now has filed a police complaint. Residents of Vamanjoor raised a complaint against Whitegrove Agri LLP over the foul smell and how children have been affected and hospitalized.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
25-05-25 02:14 pm
HK News Desk
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
25-05-25 02:46 pm
Mangalore Correspondent
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm