ಬ್ರೇಕಿಂಗ್ ನ್ಯೂಸ್
22-10-23 10:22 pm Mangaluru Correspondent ಕರಾವಳಿ
ಮಂಗಳೂರು, ಅ.22: ವಾಮಂಜೂರಿನ ಪಿಲಿಕುಳದ ಬಳಿ 2019ರಿಂದ ಕಾರ್ಯ ನಿರ್ವಹಿಸುತ್ತಿರುವ ವೈಟ್ ಗ್ರೋವ್ ಹೆಸರಿನ ಅಣಬೆ ಉತ್ಪಾದನೆ ಕೇಂದ್ರದ ಬಗ್ಗೆ ರಾಜಕೀಯ ಪ್ರೇರಿತವಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆಂದು ಅದರ ಮಾಲಕರು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಶಾಸಕ ಜೆ.ಆರ್ ಲೋಬೊ ವೈಟ್ ಗ್ರೋವ್ ಸಂಸ್ಥೆಯಲ್ಲಿ ಪಾಲುದಾರಿಕೆ ಹೊಂದಿದ್ದು ಸಾರ್ವಜನಿಕವಾಗಿ ಗುರುತಿಸಿಕೊಂಡಿದ್ದಾರೆ. 2019ರಲ್ಲಿ ಕೇಂದ್ರ ಸರ್ಕಾರದ ಸಣ್ಣ ಕೈಗಾರಿಕಾ ಸಚಿವಾಲಯದಲ್ಲಿ ಮೈಕ್ರೋ ಯೂನಿಟ್ ಎಂದು ನೋಂದಣಿ ಮಾಡಿ ಆರಂಭಿಸಲಾಗಿತ್ತು. ಕೇಂದ್ರದಲ್ಲಿ ಅಣಬೆ ಕೃಷಿ ಜೊತೆಗೆ ತೋಟಗಾರಿಕೆ ಕೆಲಸವನ್ನೂ ಎರಡು ವರ್ಷಗಳಿಂದ ಮಾಡಿಕೊಂಡಿದ್ದಾರೆ.


ಇದಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದಿದ್ದಾರೆ. ಆರಂಭದ ಎರಡು ವರ್ಷ ಕಾಲ ಯಾವುದೇ ಆಕ್ಷೇಪ ಇಲ್ಲದೆ ಅಣಬೆ ಕೃಷಿ ನಡೆದು ಬಂದಿದ್ದು 2023ರ ಫೆಬ್ರವರಿ ತಿಂಗಳಲ್ಲಿ ದಿಢೀರ್ ಆಗಿ ರಾಜಕೀಯ ಪ್ರೇರಿತವಾಗಿ ಕೆಲವರು ದುರ್ವಾಸನೆ ಬರುತ್ತಿರುವ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ರಾಸಾಯನಿಕ ಬಳಸುತ್ತಿದ್ದಾರೆ ಎಂದು ಗುಲ್ಲು ಎಬ್ಬಿಸಿದ್ದಾರೆ. ಈ ಬಗ್ಗೆ ತಜ್ಞರ ಸಮಿತಿಯಿಂದ ವರದಿ ಪಡೆದ ಜಿಲ್ಲಾಧಿಕಾರಿಯವರು ಗೊಬ್ಬರ ಮುಚ್ಚುವ ಆದೇಶ ಹಿಂಪಡೆದು ಕಾಂಪೋಸ್ಟ್ ಮಾಡುವಂತೆ ಸೂಚಿಸಿದ್ದರು.
ಅದರಂತೆ ಅಣಬೆ ಕೃಷಿ ಮತ್ತೆ ಆರಂಭಿಸಿದ್ದರೂ, ಒಂದು ಗುಂಪು ಸುಳ್ಳು ಮತ್ತು ಮಾನಹಾನಿಕರ ಸುದ್ದಿಗಳನ್ನು ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ವಾಟ್ಸಾಪ್, ಫೇಸ್ಬುಕ್, ಯೂಟ್ಯೂಬ್, ಇನ್ಸ್ ಟಾ ಗ್ರಾಮ್ ಗಳಲ್ಲಿ ಸಂದೇಶ ಹರಡುತ್ತಿದ್ದಾರೆ. ನಮ್ಮ ಅಣಬೆ ಘಟಕದ ಚಟುವಟಿಕೆಗಳಿಂದ ಯಾವುದೇ ಕೆಟ್ಟ ವಾಸನೆ ಉತ್ಪತ್ತಿಯಾಗುವುದಿಲ್ಲ. ಉದ್ದೇಶಪೂರ್ವಕ ಸುಳ್ಳು ಸುದ್ದಿಗಳನ್ನು ಹರಿಯಬಿಡುತ್ತಿದ್ದು ಮುಗ್ಧ ಜನರು ಅದನ್ನು ನಂಬಿ ಉದ್ರಿಕ್ತ ಪರಿಸ್ಥಿತಿ ತಲೆದೋರುವಂತೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
The foul smell from the White Grove Agri mushroom factory at Vamanjoor is false, says MD and former MLA JR Lobo in Mangalore, who now has filed a police complaint. Residents of Vamanjoor raised a complaint against Whitegrove Agri LLP over the foul smell and how children have been affected and hospitalized.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm