ಬ್ರೇಕಿಂಗ್ ನ್ಯೂಸ್
23-10-23 11:01 pm Mangalore Correspondent ಕರಾವಳಿ
ಬಂಟ್ವಾಳ, ಅ23: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal Youth commits suicide due to fish business loss, loss and loan.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm