ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm