ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm