ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm