ಬ್ರೇಕಿಂಗ್ ನ್ಯೂಸ್
25-10-23 12:34 pm Mangalore Correspondent ಕರಾವಳಿ
ಮಂಗಳೂರು, ಅ.25: ಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಯಲ್ಲಿ ಧರ್ಮಸ್ಥಳದ ಸೌಜನ್ಯಾ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡುರಸ್ತೆಯಲ್ಲಿ ನಿಲ್ಲಿಸಿ, ಸಂಚಾರಕ್ಕೆ ಅವಕಾಶ ನೀಡದೆ ಹಿಂದಕ್ಕೆ ಕಳಿಸಿದ ಪ್ರಸಂಗ ನಡೆದಿದೆ.
ದೇವಿ ಮಹಾತ್ಮೆ ಕಥಾನಕ ಬಿಂಬಿಸುವ ಚಿತ್ರಣದ ಸ್ತಬ್ಧಚಿತ್ರವನ್ನು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತೃತ್ವದಲ್ಲಿ ಮಾಡಲಾಗಿತ್ತು. ಟ್ಯಾಬ್ಲೋ ಎದುರಿನಲ್ಲಿ ಸೌಜನ್ಯಾ ಫೋಟೊ ಹಾಕಲಾಗಿತ್ತು. ಆದರೆ ಟ್ಯಾಬ್ಲೋ ರೆಡಿಯಾಗಿ ಬರುತ್ತಿದ್ದಂತೆ ಉರ್ವಾದಲ್ಲಿಯೇ ಪೊಲೀಸರು ಅಡ್ಡಹಾಕಿದ್ದಾರೆ. ಕೇಳಿದರೆ, ಕ್ಷೇತ್ರದ ಆಡಳಿತ ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸನ್ನ ರವಿ ಮತ್ತು ಜೊತೆಗಿದ್ದವರು ಕ್ಷೇತ್ರದ ಕಚೇರಿಗೆ ತೆರಳಿದಾಗ, ಅಲ್ಲಿದ್ದ ಸಮಿತಿ ಪದಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೆ ನುಣುಚಿಕೊಂಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ಅವರು, ಇಲ್ಲಿ ರಾಜಕೀಯ ಮಾಡಲು ಅವಕಾಶ ಇಲ್ಲ ಎಂದು ಹೇಳಿ ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಸನ್ನ ರವಿ, ನಮಗೆ ಪೊಲೀಸರು ಅವಕಾಶ ನಿರಾಕರಿಸಿಲ್ಲ. ಎಸಿಪಿಯವರು ನಮಗೆ ಪರವಾನಗಿ ನೀಡಿದ್ದರು. ಇವರೇ ಉದ್ದೇಶಪೂರ್ವಕ ಅಡ್ಡ ಹಾಕಿದ್ದಾರೆ. ಇವರಿಗೆ ಸೌಜನ್ಯಾ ಫೋಟೊ ಹಾಕಿದ ಮಾತ್ರಕ್ಕೆ ಏನು ತೊಂದರೆ ಆಗತ್ತೆ. ಅದರಲ್ಲಿ ಯಾವ ರಾಜಕೀಯ ಇದೆ. ಯಾರ್ಯಾರದ್ದೋ ಪುಂಡು ಪೋಕರಿಗಳ, ಸ್ಪಾನ್ಸರ್ ಕೊಟ್ಟವರ ಫೋಟೊ ಹಾಕುತ್ತಾರೆ. ನವರಾತ್ರಿ ಸಂದರ್ಭದಲ್ಲಿ ಇವರು ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪೊಲೀಸರು ಒಂದು ಹಂತದಲ್ಲಿ ಸೌಜನ್ಯಾ ಹೆತ್ತವರು, ಪ್ರತಿಭಟನೆಯ ಫೋಟೊ ಮುಚ್ಚುವಂತೆ ಹೇಳಿದ್ದರು. ಅದಕ್ಕೆ ಒಪ್ಪಿದ್ದ ಟ್ಯಾಬ್ಲೋದವರು ಫೋಟೊ ಕಾಣದಂತೆ ಪರದೆ ಮುಚ್ಚಿ ಹೋಗಲು ಮುಂದಾಗಿದ್ದರು. ಆದರೆ ಕೊನೆಯಲ್ಲಿ ಟ್ಯಾಬ್ಲೋ ಸಂಚಾರಕ್ಕೆ ಅವಕಾಶವನ್ನೇ ನೀಡಲಿಲ್ಲ.
Kudroli dasara 2023, Soujanya banner in tablo, stopped by police, prasanna ravi slams leaders in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm