ಬ್ರೇಕಿಂಗ್ ನ್ಯೂಸ್
12-11-20 02:51 pm Udupi Correspondent ಕರಾವಳಿ
ಉಡುಪಿ, ನ.12: ಮಾಜಿ ಸಚಿವ ಬಸನಗೌಡ ಯತ್ನಾಳ್ ಸರಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ್ರಮ ತೆಗೆದುಕೊಳ್ಳುವ ಮಾತನಾಡಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಕೂಡ ಪಕ್ಷದ ಸೀಮಿತ, ನಿಯಮಗಳನ್ನು ಮೀರಿ ವರ್ತನೆ ಮಾಡಬಾರದು. ಈ ಬಗ್ಗೆ ಪಕ್ಷದ ವಿಚಾರ, ಸಿದ್ಧಾಂತ ಹಾಗೂ ನಿಯಮದ ಆಧಾರದಲ್ಲಿ ಮಾತುಕತೆ ಮಾಡಿದ್ದೇವೆ. ಅವರ ವಿರುದ್ಧ ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿಗೆ ಸಂಬಂಧಿಸಿ ಸಂಪತ್ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಲ್ಲೂ ಸಂಪತ್ ರಾಜ್ ಕೈವಾಡ ಇರುವುದು ಸಂಪೂರ್ಣ ಬಹಿರಂಗ ಆಗಿದೆ. ಸಂಪತ್ರಾಜ್ ನಾಪತ್ತೆಯಾಗಿದ್ದು ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕಾಗಿದೆ ಎಂದು ಅವರು ಹೇಳಿದರು.
ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ರಾಜ್ಗೆ ಶರಣಾಗುವಂತೆ ಹೇಳಬೇಕು. ಸಂಪತ್ ರಾಜ್ ತಪ್ಪಿಸಿಕೊಳ್ಳುವುದರ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಭಾವ ಇದೆ. ಸಂಪತ್ ರಾಜ್ನನ್ನು ಸರಕಾರ ಬಂಧನ ಮಾಡಲೇಬೇಕು ಎಂದು ನಳಿನ್ ಒತ್ತಾಯಿಸಿದರು.

ಉಪಚುನಾವಣೆ ಸೋಲಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಕಾರಣ ಎಂಬುದಾಗಿ ಕಾರ್ಯಕರ್ತರು ಹೈಕಮಾಂಡಿಗೆ ಪತ್ರ ಬರೆದಿರುವುದು ಬಹಿರಂಗ ಆಗಿದೆ. ಆರ್.ಆರ್. ನಗರ ಸೋಲಬೇಕು ಎಂಬುದಾಗಿ ಸಿದ್ದರಾಮಯ್ಯ, ಶಿರಾ ಸೋಲಬೇಕು ಎಂಬುದಾಗಿ ಡಿಕೆಶಿ ಒಳರಾಜಕಾರಣ ಮಾಡಿದ್ದಾರೆ. ಇದು ಬಿಜೆಪಿಗೆ ಲಾಭ ಆಗಿದೆ. ಈ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿಯೇ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರಾಗಿದ್ದು ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
Will take serious action against Basangouda Patil Yatnal said BJP state president Naleen Kumar Kateel at Udupi.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm