ಬ್ರೇಕಿಂಗ್ ನ್ಯೂಸ್
12-11-20 02:51 pm Udupi Correspondent ಕರಾವಳಿ
ಉಡುಪಿ, ನ.12: ಮಾಜಿ ಸಚಿವ ಬಸನಗೌಡ ಯತ್ನಾಳ್ ಸರಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ್ರಮ ತೆಗೆದುಕೊಳ್ಳುವ ಮಾತನಾಡಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಕೂಡ ಪಕ್ಷದ ಸೀಮಿತ, ನಿಯಮಗಳನ್ನು ಮೀರಿ ವರ್ತನೆ ಮಾಡಬಾರದು. ಈ ಬಗ್ಗೆ ಪಕ್ಷದ ವಿಚಾರ, ಸಿದ್ಧಾಂತ ಹಾಗೂ ನಿಯಮದ ಆಧಾರದಲ್ಲಿ ಮಾತುಕತೆ ಮಾಡಿದ್ದೇವೆ. ಅವರ ವಿರುದ್ಧ ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿಗೆ ಸಂಬಂಧಿಸಿ ಸಂಪತ್ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಲ್ಲೂ ಸಂಪತ್ ರಾಜ್ ಕೈವಾಡ ಇರುವುದು ಸಂಪೂರ್ಣ ಬಹಿರಂಗ ಆಗಿದೆ. ಸಂಪತ್ರಾಜ್ ನಾಪತ್ತೆಯಾಗಿದ್ದು ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕಾಗಿದೆ ಎಂದು ಅವರು ಹೇಳಿದರು.
ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ರಾಜ್ಗೆ ಶರಣಾಗುವಂತೆ ಹೇಳಬೇಕು. ಸಂಪತ್ ರಾಜ್ ತಪ್ಪಿಸಿಕೊಳ್ಳುವುದರ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಭಾವ ಇದೆ. ಸಂಪತ್ ರಾಜ್ನನ್ನು ಸರಕಾರ ಬಂಧನ ಮಾಡಲೇಬೇಕು ಎಂದು ನಳಿನ್ ಒತ್ತಾಯಿಸಿದರು.

ಉಪಚುನಾವಣೆ ಸೋಲಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಕಾರಣ ಎಂಬುದಾಗಿ ಕಾರ್ಯಕರ್ತರು ಹೈಕಮಾಂಡಿಗೆ ಪತ್ರ ಬರೆದಿರುವುದು ಬಹಿರಂಗ ಆಗಿದೆ. ಆರ್.ಆರ್. ನಗರ ಸೋಲಬೇಕು ಎಂಬುದಾಗಿ ಸಿದ್ದರಾಮಯ್ಯ, ಶಿರಾ ಸೋಲಬೇಕು ಎಂಬುದಾಗಿ ಡಿಕೆಶಿ ಒಳರಾಜಕಾರಣ ಮಾಡಿದ್ದಾರೆ. ಇದು ಬಿಜೆಪಿಗೆ ಲಾಭ ಆಗಿದೆ. ಈ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿಯೇ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರಾಗಿದ್ದು ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
Will take serious action against Basangouda Patil Yatnal said BJP state president Naleen Kumar Kateel at Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm