ಬ್ರೇಕಿಂಗ್ ನ್ಯೂಸ್
26-10-23 09:20 pm Mangalore Correspondent ಕರಾವಳಿ
ಮಂಗಳೂರು, ಅ.26: ಜಿಲ್ಲಾಡಳಿತದಿಂದ ಮರಳು ನೀತಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅಧಿಕೃತವಾಗಿ ಮರಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಬೇಕಾದಷ್ಟು ಮರಳು ಸಿಗುತ್ತೆ. ಕಾಳಸಂತೆಯ ಮರಳಿಗೆ ಒಂದು ಲೋಡ್ ಮರಳಿಗೆ 21 ಸಾವಿರ ರೂ. ಕೇಳುತ್ತಿದ್ದಾರೆ. ಅಷ್ಟು ದರ ಕೊಟ್ಟರೆ ಎಲ್ಲಿಗೆ ಬೇಕಾದರೂ ಮರಳು ಹಾಕುತ್ತಾರೆ. ಜಿಲ್ಲಾಡಳಿತವೇ ಇಂತಹ ಅಕ್ರಮಕ್ಕೆ ಅವಕಾಶ ನೀಡುತ್ತಿದ್ದು, ಇದರಿಂದ ಕಟ್ಟಡ ಮಾಲಕರು, ನಿರ್ಮಾಣಕಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಿವಿಲ್ ಕಂಟ್ರಾಕ್ಟರ್ ಅಸೋಸಿಯೇಶನ್ ಸಂಘದವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂಘದ ಪ್ರಮುಖರಾದ ಬಸ್ತಿ ಪುರುಷೋತ್ತಮ ಶೆಣೈ ಮತ್ತು ಮಹಾಬಲ ಕೊಟ್ಟಾರಿ, ಕಟ್ಟಡ ನಿರ್ಮಾಣಕ್ಕೆ ನೈಸರ್ಗಿಕವಾಗಿ ಸಿಗುತ್ತಿದ್ದ ಮರಳು ಇತ್ತೀಚಿನ ವರ್ಷಗಳಲ್ಲಿ ಸೂಕ್ತ ದರದಲ್ಲಿ ಸಿಗದಂತಾಗಿದೆ. ಇದರಿಂದ ಗುತ್ತಿಗೆದಾರರು, ಕಟ್ಟಡ ನಿರ್ಮಾಣಕಾರರು ಕಾಳಸಂತೆಯಲ್ಲಿ ದುಬಾರಿ ದರ ಕೊಟ್ಟು ಖರೀದಿಸುವ ಸ್ಥಿತಿಯಾಗಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ, ಕ್ರಮ ಕೈಗೊಂಡಿಲ್ಲ. ಕಾನೂನು ರೀತಿಯಲ್ಲಿ ಮರಳು ಲಭ್ಯವಾಗದ್ದರಿಂದ ಸರಕಾರದ ರಾಯಧನಕ್ಕೂ ವಂಚನೆಯಾಗುತ್ತದೆ. ಈ ಬಗ್ಗೆ ಜೂನ್ ತಿಂಗಳಲ್ಲಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದು ಆಗಸ್ಟ್ ತಿಂಗಳಲ್ಲಿ ಮರಳು ಪೂರೈಕೆ ಅನುಮತಿ ನೀಡುವುದಾಗಿ ತಿಳಿಸಿದ್ದರು.
ನಾನ್ ಸಿಆರ್ ಝೆಡ್ ವಲಯದಲ್ಲಿ ಮರಳುಗಾರಿಕೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಿಡ್ಡುದಾರರು ವೇಯಿಂಗ್ ಬ್ರಿಜ್ ಮಾಡದೇ ಇರುವುದರಿಂದ ಮರಳು ಸಾಗಣೆಗೆ ಗಣಿ ಇಲಾಖೆ ಅವಕಾಶ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಪೂರೈಕೆಯಾಗುವ ಎಂ ಸ್ಯಾಂಡ್ ಗುಣಮಟ್ಟವೂ ಚೆನ್ನಾಗಿಲ್ಲದ ಕಾರಣ ಕಟ್ಟಡ ಮಾಲೀಕರು ಅದನ್ನು ಬಳಸಲು ಹಿಂಜರಿಯುತ್ತಿದ್ದಾರೆ. ಇದೇ ರೀತಿಯಾದಲ್ಲಿ ಸಂಪೂರ್ಣ ಕಾಮಗಾರಿಯನ್ನು ನಿಲ್ಲಿಸಬೇಕಾದ ಸ್ಥಿತಿ ಬರುತ್ತದೆ. ಎರಡು ವಾರದ ಗಡುವು ನೀಡುತ್ತಿದ್ದು ಮರಳು ಪೂರೈಕೆಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಿಲ್ಲಿಸುತ್ತೇವೆ. ಇದರಿಂದ ಕಟ್ಟಡ ಕೆಲಸ ಮಾಡುವ ಮೇಸ್ತ್ರಿಗಳು, ಮರದ ಕೆಲಸಗಾರರು, ಕಬ್ಬಿಣದ ಕೆಲಸಗಾರರು, ಕೂಲಿ ಕಾರ್ಮಿಕರು ಕೆಲಸ ಇಲ್ಲದೆ ಉಪವಾಸ ಬೀಳುವ ಸ್ಥಿತಿಯಾಗಲಿದೆ. ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕು ಎಂದು ಹೇಳಿದರು. ಇದಲ್ಲದೆ, ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಕಾರ್ಮಿಕರ ಜೊತೆಗೂಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Sand sold in illegal manner slams civil contractor's in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm