ಬ್ರೇಕಿಂಗ್ ನ್ಯೂಸ್
28-10-23 09:39 pm Mangalore Correspondent ಕರಾವಳಿ
ಉಳ್ಳಾಲ, ಅ.28: ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಧಾನ ಪರಿಷತ್ ಸದಸ್ಯ, ಮಾಜಿ ಸಿ.ಎಂ ಕುಮಾರಸ್ವಾಮಿ ಆಪ್ತ ಬಿ.ಎಂ. ಫಾರೂಕ್ ಒಡೆತನದ ವಾಣಿಜ್ಯ ಕಟ್ಟಡಕ್ಕೆ ಅಡ್ಡಿಯಾಗಿದ್ದ ಗಟ್ಟಿ ಮುಟ್ಟಾದ ಬಸ್ ಸ್ಟ್ಯಾಂಡನ್ನ ಕೆಡವಿ ಸಮೀಪದಲ್ಲೇ ಎಂಎಲ್ಸಿ ನಿಧಿಯಿಂದ ಬೇರೊಂದು ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಆಮೂಲಕ ಉದ್ಯಮಿ ಫಾರೂಕ್ ಅವರು ತನ್ನ ವ್ಯಾವಹಾರಿಕ ಉದ್ದೇಶಕ್ಕೆ ಜನರ ತೆರಿಗೆಯ 6 ಲಕ್ಷ ರೂ. ದುರುಪಯೋಗಪಡಿಸಿದ ಆರೋಪ ಕೇಳಿಬಂದಿದೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಪೊಲೀಸ್ ಠಾಣೆಗೆ ತಾಗಿಕೊಂಡಿರುವ ಒಂದು ಮಹಡಿಯ ಶಿಥಿಲಗೊಂಡ ವಾಣಿಜ್ಯ ಕಟ್ಟಡವನ್ನ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವರ್ಷದ ಹಿಂದೆ ಖರೀದಿಸಿದ್ದು ಅದೇ ಕಟ್ಟಡಕ್ಕೆ ಮತ್ತೆರಡು ಮಹಡಿಗಳನ್ನ ಹಾಕಿದ್ದಾರೆ. ಕಟ್ಟಡಕ್ಕೆ ಒಂದಿಂಚೂ ಪಾರ್ಕಿಂಗ್ ಸ್ಥಳ ಇಲ್ಲ, ಸೆಟ್ ಬ್ಯಾಕ್ ಕೂಡ ಇಲ್ಲ. ವಾಹನಗಳನ್ನ ರಸ್ತೆ ಅಂಚಿನಲ್ಲೇ ಪಾರ್ಕ್ ಮಾಡುವ ಸ್ಥಿತಿಯಿದೆ. ಸಾರ್ವಜನಿಕರ ದೂರಿನ ಮೇರೆಗೆ ಉಳ್ಳಾಲ ನಗರಸಭೆಯ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕಟ್ಟಡ ಕಾಮಗಾರಿಯನ್ನ ತಡೆ ಹಿಡಿದಿದ್ದರು. ಆದರೆ ಕೋಟಿಕುಳ ಫಾರೂಕ್ ಅವರು ತನ್ನ ಪ್ರಭಾವ ಬಳಸಿ ಕಟ್ಟಡವನ್ನ ಪೂರ್ತಿಗೊಳಿಸಿದ್ದಾರೆ.


ನಿಯಮಬಾಹಿರ ಕಟ್ಟಡದ ಮುಂಭಾಗದಲ್ಲಿ ಹಳೆಯ ಬಸ್ಸು ತಂಗುದಾಣ ಇತ್ತು. ಉಳ್ಳಾಲದ ವಿದ್ಯಾರಣ್ಯ ಕಲಾವೃಂದದವರು ಈ ಬಸ್ ತಂಗುದಾಣವನ್ನ ನಿರ್ಮಿಸಿದ್ದರು. ವಾಣಿಜ್ಯ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳುತ್ತಲೇ ಕಟ್ಟಡಕ್ಕೆ ಅಡ್ಡಲಾಗಿದ್ದ ಬಸ್ ತಂಗುದಾಣವು ಶಿಥಿಲಗೊಂಡಂತೆ ಕಂಡಿದ್ದು ಸಮೀಪದಲ್ಲೇ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ 6 ಲಕ್ಷ ವ್ಯಯಿಸಿ ಪಕ್ಕದಲ್ಲೇ ಬೇರೊಂದು ಬಸ್ಸು ತಂಗುದಾಣ ನಿರ್ಮಿಸಿದ್ದಾರೆ. ತನ್ನ ಕಟ್ಟಡಕ್ಕೆ ಮುಳುವಾಗಿದ್ದ ಬಸ್ ತಂಗುದಾಣವನ್ನ ಒಡೆದು ಪುಡಿ ಮಾಡಿದ್ದಾರೆ. ನೂತನ ಬಸ್ ತಂಗುದಾಣಕ್ಕೆ ವಿದ್ಯಾರಣ್ಯ ಕಲಾವೃಂದದ ಬೋರ್ಡ್ ಹಾಕಿ ಸ್ಥಳೀಯರನ್ನ ಸಮಾಧಾನ ಪಡಿಸಿದ್ದು ಪಕ್ಕದಲ್ಲೇ ಬಿ.ಎಂ. ಫಾರೂಕರ ನಗುಮೊಗದ ಫೊಟೋ ಹಾಕಿ ಸ್ವಂತ ಖರ್ಚಿನಲ್ಲಿ ಬಸ್ ತಂಗುದಾಣ ನಿರ್ಮಿಸಿದಂತೆ ಬಿಂಬಿಸಲಾಗಿದೆ.

ಉಳ್ಳಾಲ ಪೊಲೀಸರು ಈ ಹಿಂದೆ ಫಾರೂಕರಿಗೆ ಸೇರಿದ್ದ ಮರಳು ಲಾರಿಯನ್ನ ಜಪ್ತಿಗೊಳಿಸಿದಾಗ ಅದು ಮರಳಲ್ಲ, ಜೇಡಿ ಮಣ್ಣೆಂದು ಹೇಳಿ ಲಾರಿಯನ್ನ ಬಿಡಿಸಿದ್ದರು. ಈಗ ತನ್ನ ಕಟ್ಟಡದ ಸೌಂದರ್ಯಕ್ಕೆ ಧಕ್ಕೆ ಆಗಬಾರದು, ವ್ಯವಹಾರಕ್ಕೆ ಅಡ್ಡಿ ಆಗಬಾರದೆಂದು ಬಸ್ ತಂಗುದಾಣವನ್ನ ಕೆಡವಿ ಸರಕಾರದ ಹಣದಲ್ಲಿ ಬೇರೊಂದು ಬಸ್ ನಿಲ್ದಾಣ ಮಾಡಿದ್ದಾರೆ. ಇದನ್ನೆಲ್ಲ ಪ್ರಶ್ನಿಸಬೇಕಿದ್ದ ಉಳ್ಳಾಲದ ನಾಯಕರು ಮಾತ್ರ ತಮಗೇನೂ ಗೊತ್ತಿಲದ ರೀತಿಯಲ್ಲಿ ತೆಪ್ಪಗೆ ಕೂತಿದ್ದಾರೆ.
Mlc Farooq destroyed bus stand obstructing his building, six lakhs fund misused at Ullal in Mangalore.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm