ಬ್ರೇಕಿಂಗ್ ನ್ಯೂಸ್
30-10-23 04:44 pm Mangalore Correspondent ಕರಾವಳಿ
ಉಳ್ಳಾಲ, ಅ.30: ಆತ್ಮಹತ್ಯೆ ತಡೆಗೆಂದು ನೇತ್ರಾವತಿ ನದಿಯ ಸೇತುವೆಯ ಇಬ್ಬದಿಗೆ ಹಾಕಿದ್ದ ತಡೆ ಬೇಲಿಯನ್ನೇ ಹಾರಿ ಯುವಕನೋರ್ವ ನದಿಗೆ ಜಿಗಿದಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರಿನತ್ತ ಹುಂಡೈ ಐ10 ಕಾರಲ್ಲಿ ತೆರಳುತ್ತಿದ್ದ ಯುವಕನೋರ್ವ ಕಾರನ್ನ ಸೇತುವೆ ಬಳಿಯಲ್ಲೇ ನಿಲ್ಲಿಸಿದ್ದಾನೆ. ವಾಹನ ಸವಾರರು ನೋಡ ನೋಡುತ್ತಲೇ ಸೇತುವೆಯ ತುದಿಯ ಆವರಣ ಗೋಡೆ ಹಾರಿದ ಯುವಕ ಆವರಣ ಗೋಡೆಗೆ ಅಳವಡಿಸಲಾಗಿದ್ದ ಪೈಪ್ ಲೈನ್ ಗಳ ಮೇಲೆ ನಡೆಯುತ್ತಲೇ ಸೇತುವೆ ಮಧ್ಯ ಭಾಗ ತಲುಪಿ ನದಿಗೆ ಜಿಗಿದು ನೀರು ಪಾಲಾಗಿದ್ದಾನೆ. ಯುವಕ ನೀರು ಪಾಲಾಗುತ್ತಿರುವ ದೃಶ್ಯವನ್ನ ಕೆಲವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.


ಚಿಕ್ಕಮಂಗಳೂರು ಮೂಲದ ಪ್ರಸನ್ನ ಕುಮಾರ್ ಎಂಬವರ ಹೆಸರಲ್ಲಿ ಕಾರು ನೋಂದಣಿಗೊಂಡಿದೆ. ಅಲ್ಲದೆ, ಕಾರಲ್ಲಿ ಪ್ರಸನ್ನ ಅವರ ಡ್ರೈವಿಂಗ್ ಲೈಸೆನ್ಸ್ ದೊರಕಿದೆ. ಸ್ಥಳೀಯ ನಾಡದೋಣಿಗಳಿಂದ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಸನ್ನ ಅವರ ಫ್ಯಾಮಿಲಿಯನ್ನು ಪೊಲೀಸರು ಸಂಪರ್ಕಿಸಿದ್ದು ಪ್ರಸನ್ನ ಮತ್ತು ಸುಮನ್ ಎಂಬವರು ತರಕಾರಿ ಮಾರಾಟಕ್ಕೆಂದು ಮಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈಗ ನೀರಿಗೆ ಹಾರಿದ ವ್ಯಕ್ತಿ ಪ್ರಸನ್ನ ಹೌದಾ ಅಥವಾ ಬೇರೆ ವ್ಯಕ್ತಿಯೇ ಎಂದು ಗೊತ್ತಾಗಿಲ್ಲ.
ನೇತ್ರಾವತಿ ಸೇತುವೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆತ್ಮಹತ್ಯೆಗಳಿಗೆ ಕಡಿವಾಣ ಹಾಕಲು ಮಂಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಎರಡು ವರ್ಷಗಳ ಹಿಂದೆ ಸುಮಾರು 50 ಲಕ್ಷ ವೆಚ್ಚದಲ್ಲಿ ಸೇತುವೆಗೆ ಕಬ್ಬಿಣದ ತಡೆ ಬೇಲಿ ಅಳವಡಿಸಿತ್ತು. ಬೇಲಿ ಅಳವಡಿಸಿದ ನಂತರ ಸೇತುವೆಯಲ್ಲಿ ಹಾರಿ ಸಾಯುವುದು ಕಡಿಮೆಯಾಗಿತ್ತು. ಇದೀಗ ಬೇಲಿಯನ್ನೇ ಲೆಕ್ಕಿಸದೆ ಯುವಕ ನದಿಗೆ ಜಿಗಿದಿದ್ದು ಸಾವಿನ ದಾರಿ ಹಿಡಿದವನಿಗೆ ಬೇಲಿ ಅಡ್ಡಿಯಾಗಲ್ಲ ಎನ್ನುವ ಸಂದೇಶ ನೀಡಿದ್ದಾನೆ.
Chikmagaluru man jumps into Netravati river at Ullal bridge in Mangalore by parking his car aside.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm