ಬ್ರೇಕಿಂಗ್ ನ್ಯೂಸ್
30-10-23 04:44 pm Mangalore Correspondent ಕರಾವಳಿ
ಉಳ್ಳಾಲ, ಅ.30: ಆತ್ಮಹತ್ಯೆ ತಡೆಗೆಂದು ನೇತ್ರಾವತಿ ನದಿಯ ಸೇತುವೆಯ ಇಬ್ಬದಿಗೆ ಹಾಕಿದ್ದ ತಡೆ ಬೇಲಿಯನ್ನೇ ಹಾರಿ ಯುವಕನೋರ್ವ ನದಿಗೆ ಜಿಗಿದಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೊಕ್ಕೊಟ್ಟಿನಿಂದ ಮಂಗಳೂರಿನತ್ತ ಹುಂಡೈ ಐ10 ಕಾರಲ್ಲಿ ತೆರಳುತ್ತಿದ್ದ ಯುವಕನೋರ್ವ ಕಾರನ್ನ ಸೇತುವೆ ಬಳಿಯಲ್ಲೇ ನಿಲ್ಲಿಸಿದ್ದಾನೆ. ವಾಹನ ಸವಾರರು ನೋಡ ನೋಡುತ್ತಲೇ ಸೇತುವೆಯ ತುದಿಯ ಆವರಣ ಗೋಡೆ ಹಾರಿದ ಯುವಕ ಆವರಣ ಗೋಡೆಗೆ ಅಳವಡಿಸಲಾಗಿದ್ದ ಪೈಪ್ ಲೈನ್ ಗಳ ಮೇಲೆ ನಡೆಯುತ್ತಲೇ ಸೇತುವೆ ಮಧ್ಯ ಭಾಗ ತಲುಪಿ ನದಿಗೆ ಜಿಗಿದು ನೀರು ಪಾಲಾಗಿದ್ದಾನೆ. ಯುವಕ ನೀರು ಪಾಲಾಗುತ್ತಿರುವ ದೃಶ್ಯವನ್ನ ಕೆಲವರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.


ಚಿಕ್ಕಮಂಗಳೂರು ಮೂಲದ ಪ್ರಸನ್ನ ಕುಮಾರ್ ಎಂಬವರ ಹೆಸರಲ್ಲಿ ಕಾರು ನೋಂದಣಿಗೊಂಡಿದೆ. ಅಲ್ಲದೆ, ಕಾರಲ್ಲಿ ಪ್ರಸನ್ನ ಅವರ ಡ್ರೈವಿಂಗ್ ಲೈಸೆನ್ಸ್ ದೊರಕಿದೆ. ಸ್ಥಳೀಯ ನಾಡದೋಣಿಗಳಿಂದ ಪೊಲೀಸರು ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ. ಪ್ರಸನ್ನ ಅವರ ಫ್ಯಾಮಿಲಿಯನ್ನು ಪೊಲೀಸರು ಸಂಪರ್ಕಿಸಿದ್ದು ಪ್ರಸನ್ನ ಮತ್ತು ಸುಮನ್ ಎಂಬವರು ತರಕಾರಿ ಮಾರಾಟಕ್ಕೆಂದು ಮಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಈಗ ನೀರಿಗೆ ಹಾರಿದ ವ್ಯಕ್ತಿ ಪ್ರಸನ್ನ ಹೌದಾ ಅಥವಾ ಬೇರೆ ವ್ಯಕ್ತಿಯೇ ಎಂದು ಗೊತ್ತಾಗಿಲ್ಲ.
ನೇತ್ರಾವತಿ ಸೇತುವೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಆತ್ಮಹತ್ಯೆಗಳಿಗೆ ಕಡಿವಾಣ ಹಾಕಲು ಮಂಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಎರಡು ವರ್ಷಗಳ ಹಿಂದೆ ಸುಮಾರು 50 ಲಕ್ಷ ವೆಚ್ಚದಲ್ಲಿ ಸೇತುವೆಗೆ ಕಬ್ಬಿಣದ ತಡೆ ಬೇಲಿ ಅಳವಡಿಸಿತ್ತು. ಬೇಲಿ ಅಳವಡಿಸಿದ ನಂತರ ಸೇತುವೆಯಲ್ಲಿ ಹಾರಿ ಸಾಯುವುದು ಕಡಿಮೆಯಾಗಿತ್ತು. ಇದೀಗ ಬೇಲಿಯನ್ನೇ ಲೆಕ್ಕಿಸದೆ ಯುವಕ ನದಿಗೆ ಜಿಗಿದಿದ್ದು ಸಾವಿನ ದಾರಿ ಹಿಡಿದವನಿಗೆ ಬೇಲಿ ಅಡ್ಡಿಯಾಗಲ್ಲ ಎನ್ನುವ ಸಂದೇಶ ನೀಡಿದ್ದಾನೆ.
Chikmagaluru man jumps into Netravati river at Ullal bridge in Mangalore by parking his car aside.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm