ಬ್ರೇಕಿಂಗ್ ನ್ಯೂಸ್
30-10-23 08:09 pm Mangalore Correspondent ಕರಾವಳಿ
ಬಂಟ್ವಾಳ, ಅ.30: ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವ ವಿವಾಹಿತ ತರುಣಿ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಜೀಪ ಮೂಡದಲ್ಲಿ ನಡೆದಿದೆ.
ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಯುವತಿ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಪ್ರೇಮವಿವಾಹ ಆಗಿದ್ದರೂ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾಗಿದ್ದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝುಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಇದರಿಂದ ಬೇಸತ್ತ ನೌಸೀನ್ ಉಳ್ಳಾಲದ ಗಂಡನ ಮನೆಯಿಂದ ಸಜೀಪ ಗ್ರಾಮದ ತಾಯಿ ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ ಅ.25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ಅಣ್ಣ ನಾಸೀರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಲವ್ ಮ್ಯಾರೇಜ್, ಚಿನ್ನಾಭರಣ ಮಾರಿದ್ದ ಗಂಡ
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಉಳ್ಳಾಲ ಮೂಲದ ಯುವಕ ಅಜ್ಮಾನ್ ಎಂಬಾತನಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿದ್ದಳ. ಬಳಿಕ ಇವರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಆಗಸ್ಟ್ 14 ರಂದು ಮದುವೆಯಾಗಿದ್ದರು. ಆದರೆ ಅಜ್ಮಾನ್ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಬಳಿಯಿದ್ದ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದಲ್ಲದೆ ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರೆಂದು ತಾಯಿ ಮನೆಯಲ್ಲಿ ಮಗಳು ತಿಳಿಸಿದ್ದಳು.
ಗಂಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
Dowry harrassment, 22 year old newly married girl commits suicide at her house at Bantwal in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm