ಬ್ರೇಕಿಂಗ್ ನ್ಯೂಸ್
30-10-23 08:09 pm Mangalore Correspondent ಕರಾವಳಿ
ಬಂಟ್ವಾಳ, ಅ.30: ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವ ವಿವಾಹಿತ ತರುಣಿ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಜೀಪ ಮೂಡದಲ್ಲಿ ನಡೆದಿದೆ.
ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಯುವತಿ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಪ್ರೇಮವಿವಾಹ ಆಗಿದ್ದರೂ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾಗಿದ್ದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝುಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಇದರಿಂದ ಬೇಸತ್ತ ನೌಸೀನ್ ಉಳ್ಳಾಲದ ಗಂಡನ ಮನೆಯಿಂದ ಸಜೀಪ ಗ್ರಾಮದ ತಾಯಿ ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ ಅ.25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿಯ ಅಣ್ಣ ನಾಸೀರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಲವ್ ಮ್ಯಾರೇಜ್, ಚಿನ್ನಾಭರಣ ಮಾರಿದ್ದ ಗಂಡ
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಉಳ್ಳಾಲ ಮೂಲದ ಯುವಕ ಅಜ್ಮಾನ್ ಎಂಬಾತನಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿದ್ದಳ. ಬಳಿಕ ಇವರು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಆಗಸ್ಟ್ 14 ರಂದು ಮದುವೆಯಾಗಿದ್ದರು. ಆದರೆ ಅಜ್ಮಾನ್ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಬಳಿಯಿದ್ದ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದಲ್ಲದೆ ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರೆಂದು ತಾಯಿ ಮನೆಯಲ್ಲಿ ಮಗಳು ತಿಳಿಸಿದ್ದಳು.
ಗಂಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
Dowry harrassment, 22 year old newly married girl commits suicide at her house at Bantwal in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm