ಬ್ರೇಕಿಂಗ್ ನ್ಯೂಸ್
31-10-23 11:00 am Mangaluru Correspondent ಕರಾವಳಿ
ಮಂಗಳೂರು, ಅ.31: ಕರಾವಳಿಯ ಪ್ರಖ್ಯಾತ "ಆಭರಣ" ಸಂಸ್ಥೆಯ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಉಡುಪಿ, ಮಂಗಳೂರು, ಬೆಳ್ತಂಗಡಿ, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಸಂಸ್ಥೆಯ ಮಳಿಗೆಗಳಲ್ಲಿ ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಸಂಸ್ಥೆಯ ಎಲ್ಲ ಆಭರಣ ಮಳಿಗೆಗಳ ಒಳಹೊಕ್ಕಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸಾಮಾನ್ಯವಾಗಿ ಜುವೆಲ್ಲರಿ ಸಂಸ್ಥೆಯ ಮಳಿಗೆ 9.30ರ ವೇಳೆಗೆ ತೆರೆದುಕೊಳ್ಳುತ್ತದೆ. ಎಂದಿನಂತೆ ನೌಕರರು ಮಳಿಗೆಯ ಕಡೆಗೆ ಬರುತ್ತಿದ್ದಂತೆ ಶಾಕ್ ಆಗಿದ್ದು ಅದಾಗಲೇ ಮಳಿಗೆ ಓಪನ್ ಆಗಿತ್ತು. ಐಟಿ ಅಧಿಕಾರಿಗಳು ಒಳಗಡೆ ತಪಾಸಣೆಯಲ್ಲಿ ತೊಡಗಿದ್ದರು.
ಉಡುಪಿ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಭರಣ ಜುವೆಲ್ಲರಿ ಸಂಸ್ಥೆ ಹದಿನೈದು ವರ್ಷಗಳ ಮೊದಲಿಗೆ ಉಡುಪಿಯಲ್ಲಿ ಆರಂಭಗೊಂಡಿತ್ತು. ಗುಜ್ಜಾಡಿ ನರಸಿಂಹ ನಾಯಕ್ ಸೋದರರು ಮಳಿಗೆಯನ್ನು ಸ್ಥಾಪಿಸಿದ್ದು ಆನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಮಳಿಗೆಯನ್ನು ಆರಂಭಿಸಿದ್ದರು. ಉಡುಪಿ ಜಿಲ್ಲೆಯ ಉಡುಪಿ, ಪಡುಬಿದ್ರಿ, ಬ್ರಹ್ಮಾವರ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮೂರು ಕಡೆ ಜುವೆಲ್ಲರಿ ಇದೆ. ಬಂಟ್ವಾಳ, ಬೆಳ್ತಂಗಡಿಯಲ್ಲೂ ಶಾಖೆ ಇದೆ. ಆಬಳಿಕ ಬೆಂಗಳೂರು, ಶಿವಮೊಗ್ಗದಲ್ಲಿಯೂ ಮಳಿಗೆ ಸ್ಥಾಪನೆಯಾಗಿತ್ತು.
ದಿಢೀರ್ ಐಟಿ ಇಲಾಖೆಯ ದಾಳಿಯಿಂದಾಗಿ ಮಳಿಗೆಯ ನೌಕರರು, ಸಂಸ್ಥೆಯ ಮಾಲಕರು ಬೆಚ್ಚಿ ಬಿದ್ದಿದ್ದಾರೆ. ಅಧಿಕಾರಿಗಳು ಜುವೆಲ್ಲರಿ ಸಂಸ್ಥೆಯ ವಹಿವಾಟು, ಆಸ್ತಿ, ತೆರಿಗೆ ಸಂಗ್ರಹ ವಿಚಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಕದ್ರಿಯ ಶಿವಭಾಗ್ ನಲ್ಲಿ ಆಭರಣ ಜ್ಯುವೆಲ್ಲರಿಗೂ ಐಟಿ ದಾಳಿಯಾಗಿದ್ದು ಐಟಿ ಅಧಿಕಾರಿಗಳು ಟ್ಯಾಕ್ಸಿ ಇನೋವಾ ವಾಹನಗಳಲ್ಲಿ ದಾಳಿಗೆ ಬಂದಿದ್ದರು. ಐದಾರು ಮಂದಿ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದು ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ ಎನ್ನುವ ಮಾಹಿತಿಯಿದ್ದು ಎಲ್ಲ ಕಡೆಯೂ ದಾಳಿ ಆಗಿದೆ ಎನ್ನಲಾಗುತ್ತಿದೆ.
Income Tax (IT) officials conducted routine checks at the showrooms of Abharan Jewellers, a renowned jeweller of brand of coastal Karnataka, on Tuesday October 31. The routine checks by the IT officials began in the morning at multiple showrooms of the jewellery brand at Udupi, Mangaluru, Hebri, Karkala and Brahmavar.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm