ಬ್ರೇಕಿಂಗ್ ನ್ಯೂಸ್
31-10-23 11:00 am Mangaluru Correspondent ಕರಾವಳಿ
ಮಂಗಳೂರು, ಅ.31: ಕರಾವಳಿಯ ಪ್ರಖ್ಯಾತ "ಆಭರಣ" ಸಂಸ್ಥೆಯ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಉಡುಪಿ, ಮಂಗಳೂರು, ಬೆಳ್ತಂಗಡಿ, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಸಂಸ್ಥೆಯ ಮಳಿಗೆಗಳಲ್ಲಿ ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಸಂಸ್ಥೆಯ ಎಲ್ಲ ಆಭರಣ ಮಳಿಗೆಗಳ ಒಳಹೊಕ್ಕಿದ್ದು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸಾಮಾನ್ಯವಾಗಿ ಜುವೆಲ್ಲರಿ ಸಂಸ್ಥೆಯ ಮಳಿಗೆ 9.30ರ ವೇಳೆಗೆ ತೆರೆದುಕೊಳ್ಳುತ್ತದೆ. ಎಂದಿನಂತೆ ನೌಕರರು ಮಳಿಗೆಯ ಕಡೆಗೆ ಬರುತ್ತಿದ್ದಂತೆ ಶಾಕ್ ಆಗಿದ್ದು ಅದಾಗಲೇ ಮಳಿಗೆ ಓಪನ್ ಆಗಿತ್ತು. ಐಟಿ ಅಧಿಕಾರಿಗಳು ಒಳಗಡೆ ತಪಾಸಣೆಯಲ್ಲಿ ತೊಡಗಿದ್ದರು.


ಉಡುಪಿ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಭರಣ ಜುವೆಲ್ಲರಿ ಸಂಸ್ಥೆ ಹದಿನೈದು ವರ್ಷಗಳ ಮೊದಲಿಗೆ ಉಡುಪಿಯಲ್ಲಿ ಆರಂಭಗೊಂಡಿತ್ತು. ಗುಜ್ಜಾಡಿ ನರಸಿಂಹ ನಾಯಕ್ ಸೋದರರು ಮಳಿಗೆಯನ್ನು ಸ್ಥಾಪಿಸಿದ್ದು ಆನಂತರದ ವರ್ಷಗಳಲ್ಲಿ ರಾಜ್ಯಾದ್ಯಂತ ಮಳಿಗೆಯನ್ನು ಆರಂಭಿಸಿದ್ದರು. ಉಡುಪಿ ಜಿಲ್ಲೆಯ ಉಡುಪಿ, ಪಡುಬಿದ್ರಿ, ಬ್ರಹ್ಮಾವರ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮೂರು ಕಡೆ ಜುವೆಲ್ಲರಿ ಇದೆ. ಬಂಟ್ವಾಳ, ಬೆಳ್ತಂಗಡಿಯಲ್ಲೂ ಶಾಖೆ ಇದೆ. ಆಬಳಿಕ ಬೆಂಗಳೂರು, ಶಿವಮೊಗ್ಗದಲ್ಲಿಯೂ ಮಳಿಗೆ ಸ್ಥಾಪನೆಯಾಗಿತ್ತು.
ದಿಢೀರ್ ಐಟಿ ಇಲಾಖೆಯ ದಾಳಿಯಿಂದಾಗಿ ಮಳಿಗೆಯ ನೌಕರರು, ಸಂಸ್ಥೆಯ ಮಾಲಕರು ಬೆಚ್ಚಿ ಬಿದ್ದಿದ್ದಾರೆ. ಅಧಿಕಾರಿಗಳು ಜುವೆಲ್ಲರಿ ಸಂಸ್ಥೆಯ ವಹಿವಾಟು, ಆಸ್ತಿ, ತೆರಿಗೆ ಸಂಗ್ರಹ ವಿಚಾರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಕದ್ರಿಯ ಶಿವಭಾಗ್ ನಲ್ಲಿ ಆಭರಣ ಜ್ಯುವೆಲ್ಲರಿಗೂ ಐಟಿ ದಾಳಿಯಾಗಿದ್ದು ಐಟಿ ಅಧಿಕಾರಿಗಳು ಟ್ಯಾಕ್ಸಿ ಇನೋವಾ ವಾಹನಗಳಲ್ಲಿ ದಾಳಿಗೆ ಬಂದಿದ್ದರು. ಐದಾರು ಮಂದಿ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದು ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ ಎನ್ನುವ ಮಾಹಿತಿಯಿದ್ದು ಎಲ್ಲ ಕಡೆಯೂ ದಾಳಿ ಆಗಿದೆ ಎನ್ನಲಾಗುತ್ತಿದೆ.
Income Tax (IT) officials conducted routine checks at the showrooms of Abharan Jewellers, a renowned jeweller of brand of coastal Karnataka, on Tuesday October 31. The routine checks by the IT officials began in the morning at multiple showrooms of the jewellery brand at Udupi, Mangaluru, Hebri, Karkala and Brahmavar.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm