ಬ್ರೇಕಿಂಗ್ ನ್ಯೂಸ್
31-10-23 01:13 pm Udupi Correspondent ಕರಾವಳಿ
ಕಾರ್ಕಳ, ಅ.31: ಹಿರಿಯ ಪತ್ರಕರ್ತ, ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಶೇಖರ ಅಜೆಕಾರು (54) ಅವರು ಅ.31ರಂದು ಹೃದಯಾಘಾತಕ್ಕೀಡಾಗಿ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಗ್ಗೆ ಕಾರ್ಕಳದ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲೇ ಅವರು ಸಾವು ಕಂಡಿದ್ದರು.
ಮುಂಬೈನಲ್ಲಿ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಆರಂಭಿಸಿದ್ದ ಶೇಖರ ಅಜೆಕಾರು ಊರಿಗೆ ಬಂದ ಬಳಿಕ ಹಲವು ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಜನವಾಹಿನಿ ಪತ್ರಿಕೆ ಆರಂಭಗೊಂಡಾಗ ಹಲವು ಒಡನಾಡಿಗಳ ಜೊತೆಗೆ ಆ ಪತ್ರಿಕೆಯನ್ನು ಸೇರಿದ್ದರು. ಬಳಿಕ ಕನ್ನಡ ಪ್ರಭ, ವಿಜಯ ಕರ್ನಾಟಕ ಪತ್ರಿಕೆಗಳಿಗೆ ಸುದ್ದಿ ಬರೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಪತ್ರಿಕಾ ವೃತ್ತಿಯ ಜೊತೆಗೆ ಸಾಹಿತ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿ ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸಿ ಗಮನ ಸೆಳೆದಿದ್ದರು.
ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್ ಅಜೆಕಾರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಚಿರಪರಿಚಿತ ಹೆಸರು. ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Renowned writer, journalist Shekhar Ajekar passes away. Renowned writer, journalist Shekar Ajekar passed away on Tuesday October 31 due to cardiac arrest. Shekar Ajekar was actively involved in various social service oriented organisations and also a known name in the literature fraternity.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm