ಬ್ರೇಕಿಂಗ್ ನ್ಯೂಸ್
31-10-23 09:41 pm Mangaluru Correspondent ಕರಾವಳಿ
ಉಳ್ಳಾಲ, ಅ.31: ರಾಜ್ಯದ 68 ವೈಯಕ್ತಿಕ ಸಾಧಕರು, 10 ಸಂಘ ಸಂಸ್ಥೆಗಳಿಗೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಕ್ರಿಕೆಟ್ ಆಟದಲ್ಲಿ ಉತ್ತುಂಗಕ್ಕೇರಿ ಬಂದ ಪ್ರಶಸ್ತಿ ಮೊತ್ತದಲ್ಲೇ ಜನಸೇವೆಯಲ್ಲಿ ತೊಡಗಿಸಿದ್ದ ಉಳ್ಳಾಲದ ಮಾರುತಿ ಜನಸೇವಾ ಸಂಘಕ್ಕೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕಳೆದ ಮೂವತ್ತು ವರುಷಗಳ ಹಿಂದೆ ಉಳ್ಳಾಲದ ಮೊಗವೀರ ಪಟ್ಣದಲ್ಲಿ ಹುಟ್ಟಿಕೊಂಡ ಮಾರುತಿ ಕ್ರಿಕೆಟರ್ಸ್ ತಂಡವು ಕ್ರಿಕೆಟ್ ಆಟದಲ್ಲಿ ಉತ್ತಮ ಪ್ರದರ್ಶನಗಳನ್ನ ನೀಡಿ ಸಿಕ್ಕಿದ ಪ್ರಶಸ್ತಿಯ ಮೊತ್ತವನ್ನ ಸಮಾಜ ಸೇವೆಗೆ ವಿನಿಯೋಗಿಸುತ್ತ ಮಾರುತಿ ಜನಸೇವಾ ಸಂಘವೆಂದು ಹೆಸರುವಾಸಿಯಾಗಿದೆ.
ವಿ.ವಿ ಮಟ್ಟದ ಖ್ಯಾತ ಕ್ರಿಕೆಟ್ ಆಟಗಾರರಾದ ಸುಧೀರ್ ವಿ. ಅಮೀನ್, ಅಶ್ವಥ್ ಪುತ್ರನ್, ಉದಯ ಸಾಲ್ಯಾನ್, ದಿನೇಶ್ ಕರ್ಕೇರ, ಅನಿಲ್ ಚರಣ್ ರಂತವರಿಗೆ ಇದೇ ತಂಡ ವೇದಿಕೆ ಆಗಿತ್ತು.
ಸಂಘದ ಬೆಳ್ಳಿಹಬ್ಬದ ನೆನಪಿಗಾಗಿ ಉಳ್ಳಾಲ ಮೊಗವೀರ ಸಂಘದ ಹಿರಿಯರು ಕಟ್ಟಿಸಿದ್ದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಗೆ ಅಂದಾಜು 1.5 ಕೋಟಿ ರೂ. ವೆಚ್ಚದಲ್ಲಿ ಒಂದು ಮಹಡಿಯ ಸುಸಜ್ಜಿತ ಕಟ್ಟಡವನ್ನ ಮರು ನಿರ್ಮಿಸಿ ಕೊಟ್ಟು ಅದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಉಳ್ಳಾಲದಲ್ಲಿ ಪ್ರಪ್ರಥಮವಾಗಿ ಎರಡು ದಿವಸಗಳ ಬೀಚ್ ಉತ್ಸವವನ್ನು ನಡೆಸಿ ಸರ್ವ ಧರ್ಮೀಯರಿಂದ ಶಹಬಾಷ್ ಗಳಿಸಿದ ಕೀರ್ತಿ ಮಾರುತಿ ಜನಸೇವಾ ಸಂಘಕ್ಕೆ ಸಲ್ಲುತ್ತದೆ.


ಕಡಲ್ಕೊರೆತಕ್ಕೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಸಂಘದ ವತಿಯಿಂದ ಐದು ಮನೆ ನಿರ್ಮಿಸಿ ಕೊಡಲಾಗಿದೆ. ಕನಿಷ್ಟ ಎಂದರೂ ವರ್ಷಕ್ಕೆ ಐದು ಲಕ್ಷ ರೂ. ವ್ಯಯಿಸಿ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ಸ್ಥಳೀಯ ದೇವಸ್ಥಾನದ ಪ್ರಧಾನ ಅರ್ಚಕರು, ಗುರಿಕಾರ ವೃಂದ ಹಾಗೂ ದೈವ ನರ್ತಕರಿಗೆ ಸಹಾಯಧನ ವಿತರಣೆ,ಕೊರೊನ ಲಾಕ್ ಡೌನ್ ಸಂದರ್ಭ 6ಲಕ್ಷ ರೂ. ವೆಚ್ಚ ಭರಿಸಿ ಆಹಾರ ಕಿಟ್ ಗಳನ್ನ ಸಂಘದ ವತಿಯಿಂದ ವಿತರಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಮೂವತ್ತು ಕುಟುಂಬಕ್ಕೆ ಸಾಮೂಹಿಕ ವಿವಾಹ ಮಾಡುವ ಭವಿಷ್ಯದ ಯೋಜನೆಯನ್ನ ಸಂಘ ಇಟ್ಟುಕೊಂಡಿದೆ. ಮಾರುತಿ ಜನ ಸೇವಾ ಸಂಘವು ಕೆಲ ವರುಷಗಳ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಗಳಿಸಿದ್ದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
Ullal Maruthi Jana Seva Sangha to get karnataka rajyotsava award 2023 in Mangalore by Cricket charity.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm