ಬ್ರೇಕಿಂಗ್ ನ್ಯೂಸ್
01-11-23 05:42 pm Mangalore Correspondent ಕರಾವಳಿ
ಮಂಗಳೂರು, ನ.1: ಹೃದಯಾಘಾತದಿಂದ ನಿಧನರಾದ ಚಿತ್ರನಟ ಪುನೀತ್ ರಾಜ್ ಕುಮಾರ್ ಸ್ಮರಣೆಗಾಗಿ ಅವರ ಹೆಸರಲ್ಲಿ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ರಾಜ್ಯದಲ್ಲಿ 85 ಜಿಲ್ಲೆ ಮತ್ತು ತಾಲೂಕುಗಳಲ್ಲಿ ಇಸಿಜಿ ಜೊತೆಗೆ ಹಠಾತ್ ಹೃದಯಾಘಾತ ಆಗುವುದನ್ನು ತಡೆಯಲು ಉಚಿತವಾಗಿ ಇಂಜೆಕ್ಷನ್ ನೀಡಲಾಗುವುದು ಎಂದರು. ಅಲ್ಲದೆ ಜಯದೇವ ಸೇರಿದಂತೆ ರಾಜ್ಯದ 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು ಎಂದರು.


ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಅವರಿಗೆ ತಿಂಗಳಿಗೆ ಎರಡು ಸಾವಿರದಂತೆ ನೀಡಲಾಗುತ್ತಿದೆ. ಬಡವರ ಹಸಿವು ನೀಗಿಸುವ ದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 2.48 ಲಕ್ಷ ಫಲಾನುಭವಿಗಳಿದ್ದು ನಗದು ವರ್ಗಾವಣೆಯಡಿ ಇವರಿಗೆ 17.30 ಕೋಟಿ ರೂ. ಜಮೆಯಾಗಿದೆ. ಶಕ್ತಿ ಯೋಜನೆಯಡಿ ನಾಲ್ಕು ತಿಂಗಳಲ್ಲಿ ದ.ಕ. ಜಿಲ್ಲೆಯಲ್ಲಿ 183 ಲಕ್ಷ ಫಲಾನುಭವಿಗಳು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸಿದ್ದು ಇದರಿಂದ 6072 ಲಕ್ಷ ಆದಾಯ ಬಂದಿದೆ. ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ ಎಂದು ತೋರಿಸಿಕೊಟ್ಟಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಇದೇ ವೇಳೆ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಒಟ್ಟು 47 ಮಂದಿಗೆ ಹಾಗೂ 17 ಸಂಸ್ಥೆಗಳಿಗೆ ಪ್ರದಾನ ಮಾಡಲಾಯಿತು.
Free injection in the name of Puneeth Rajkumar to save people from Heart Attack says Dinesh Gundurao in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm