ಬ್ರೇಕಿಂಗ್ ನ್ಯೂಸ್
03-11-23 11:39 am Mangalore Correspondent ಕರಾವಳಿ
ಮಂಗಳೂರು, ನ.3: ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.
ಸುಳ್ಯ ಮೂಲದ ವಿವೇಕ್ (18) ಎಂಬ ಯುವಕ ಕೃತ್ಯ ಎಸಗಿದ್ದು ಸ್ಥಳೀಯರು ಹಿಡಿದು ಆತನಿಗೆ ಥಳಿಸಿದ್ದಾರೆ. ಈತ ಮಂಗಳೂರಿನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದು ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿ ಹಾಸ್ಟೆಲ್ ನಲ್ಲಿ ಕೆಲಸಕ್ಕಿದ್ದ ಯುವತಿಯ ಜೊತೆಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಫೋನ್ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ.
ಆದರೆ ಯುವತಿ ನಿನ್ನ ಜೊತೆಗೆ ಬರುವುದಿಲ್ಲ ಎಂದು ಹೇಳಿ ನಿರಾಕರಣೆ ಮಾಡಿದ್ದಳು. ಪದೇ ಪದೇ ಕರೆ ಮಾಡಿದರೂ ಕೆಲಸ ಇದೆಯೆಂದು ಹೇಳಿ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪಿಜಿ ಹಾಸ್ಟೆಲ್ ಮೇಲೆ ಕಲ್ಲು ತೂರಿದ್ದಾನೆ. ಹಾಸ್ಟೆಲ್ ಕಿಟಕಿ, ಗಾಜು ಒಡೆದು ಹೋಗಿದ್ದು ದಾಂಧಲೆಗೆ ಯತ್ನಿಸಿದ ಯುವಕನನ್ನು ಕೂಡಲೇ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಯುವಕನನ್ನು ಹಿಡಿದು ಥಳಿಸಿ ಕೂಡಿಹಾಕಿದ್ದರು. ಬಳಿಕ ಕದ್ರಿ ಪೊಲೀಸರನ್ನು ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a youth pelted stones at a PG hostel building near Agnes College in mangaluru on Thursday night after he refused to come out with a girl he was in love with.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm