ಬ್ರೇಕಿಂಗ್ ನ್ಯೂಸ್
03-11-23 09:19 pm Mangalore Correspondent ಕರಾವಳಿ
ಮಂಗಳೂರು, ನ.3: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 7ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 30 ರಂದು ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗಾರ ಪ್ರಸಾದ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ 7ನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.



ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಕುಮಾರ್ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಂಗಳೂರು ಕಂಬಳ ಸಮಿತಿಯ ಕಾರ್ಯದರ್ಶಿ ಮನ್ಮಥ ಶೆಟ್ಟಿಯವರನ್ನು ಕಂಬಳ ಸಮಿತಿಯಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ವಿಜಯಕುಮಾರ್ ಕಂಗಿನಮನೆ, ಮಹಾನಗರ ಪಾಲಿಕೆ ಸದಸ್ಯರಾದ ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಉಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
December 30 to 31 7th year Kambala to be held in Mangalore by Brijesh Chowta at Gold finch city.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm