ಬ್ರೇಕಿಂಗ್ ನ್ಯೂಸ್
03-11-23 09:59 pm Mangalore Correspondent ಕರಾವಳಿ
ಪುತ್ತೂರು, ನ.3: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದಾರೆ. ಚುನಾವಣೆ ಸ್ಪರ್ಧೆ, ಪದವಿಯಲ್ಲಿ ನನಗೆ ಆಸಕ್ತಿಯಿಲ್ಲ ಎಂದು ಡೀವಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಸುಳ್ಯದಂತಹ ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. ಇನ್ನು ಏನಿದ್ದರೂ ಪಕ್ಷವನ್ನು ಗೆಲ್ಲಿಸುವುದರಲ್ಲಿ ನನಗೆ ಆಸಕ್ತಿ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿ ಮಾಡುವುದರಲ್ಲಷ್ಟೆ ನನ್ನ ಆದ್ಯತೆ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಯಾರು ನಿಂತರೂ ಬಿಜೆಪಿಗೆ ಸೋಲಾಗಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಇದು ಅನ್ವಯವಾಗಲಿದೆ. 25 ಅಲ್ಲ, ಈ ಬಾರಿ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಕ್ಷದ ಕೇಂದ್ರ ನಾಯಕರ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದ ಡೀವಿ ಸದಾನಂದ ಗೌಡ, ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ದೆಹಲಿಯಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ದಿಢೀರ್ ಆಗಿ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ.
ಹೀಗಾಗಿ ದೆಹಲಿಗೆ ತೆರಳಿದ್ದಾಗ ಚುನಾವಣೆ ರಾಜಕಾರಣದಿಂದ ಹಿಂದೆ ಸರಿಯಲು ಕೇಂದ್ರ ನಾಯಕರೇ ಸೂಚಿಸಿದ್ದರೇ ಅನ್ನುವ ಅನುಮಾನ ಬಂದಿದೆ. ಚುನಾವಣೆ ಸ್ಪರ್ಧೆ ಮಾಡಲ್ಲ ಎಂದು ಪರೋಕ್ಷವಾಗಿ ಡಿವಿಎಸ್ ಹೇಳಿರುವುದು ಅಚ್ಚರಿ ಮೂಡಿಸಿದೆ.
Sadananda Gowda, not interested to contest in coming elections.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am