ಬ್ರೇಕಿಂಗ್ ನ್ಯೂಸ್
04-11-23 11:50 am Mangalore Correspondent ಕರಾವಳಿ
ಮಂಗಳೂರು, ನ.4: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದ.ಕ. ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಮಹತ್ವದ ತೀರ್ಪು ನೀಡಿದ್ದು ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿಯ ನಿವಾಸಿ ಶ್ರೀಕಾಂತ್ ಶಿಕ್ಷೆಗೊಳಗಾದ ಆರೋಪಿ.
ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯೊಂದಕ್ಕೆ ಸೇರಿದ ಶೆಡ್ ಒಂದರಲ್ಲಿ ಪರಿಶಿಷ್ಟ ವರ್ಗದ ಬಾಲಕಿ ಪೋಷಕರೊಂದಿಗೆ ವಾಸವಿದ್ದಳು. ಆರೋಪಿ ಶ್ರೀಕಾಂತ್ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಪ್ರೀತಿಸುವ ನೆಪದಲ್ಲಿ ಬಾಲಕಿಯ ಮನವೊಲಿಸಿ ಏಪ್ರಿಲ್ 12, 2019ರಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಇದರ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶಾಲೆಯಲ್ಲಿ ಅಸ್ವಸ್ಥಳಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಬಳಿಕ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಪೋಲಿಸ್ ದೂರು ನೀಡಿದ್ದಳು.
ಬಜ್ಪೆ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಎಸಿಪಿ ಕೆ.ಯು. ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಐಪಿಸಿ ಕಲಂ 376(2) ಎನ್ ಅಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿಣ ಸಜೆ, 506 ಅಡಿಯಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದೆ. ಅಲ್ಲದೆ, ನೊಂದ ಬಾಲಕಿಗೆ 10.50 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ಮಾಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.
Bagalkote man sentensed to 20 years of imprisonment for rape of Dalit girl in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm