ಬ್ರೇಕಿಂಗ್ ನ್ಯೂಸ್
05-11-23 08:58 pm Mangalore Correspondent ಕರಾವಳಿ
ಮಂಗಳೂರು, ನ.5: ಮರಳಿನ ಸಮಸ್ಯೆಗೆ ಕಾಂಗ್ರೆಸ್ ಆಡಳಿತ ಕಾರಣ ಎಂದು ದೂರಿರುವ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದು ನಿಮ್ಮ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಯಾಕೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸಚಿವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು ಶಾಸಕರಾದ ವೇದವ್ಯಾಸ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ.
![]()
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಟಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Dinesh Gundurao slams Vedavyas Kamath over sand dispute in Mangalore. What has double engine government done while governance in state he added.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm