ಬ್ರೇಕಿಂಗ್ ನ್ಯೂಸ್
13-11-20 11:49 am Udupi Correspondent ಕರಾವಳಿ
ಉಡುಪಿ, ನ.13: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸರಕಾರಿ /ಖಾಸಗಿ/ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಕೋವಿಡ್ ಮಾರ್ಗಸೂಚಿಯಡಿ ಆರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರದೊಂದಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲಾ ಅಧ್ಯಾಪಕರು, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಾಲೇಜುಗಳಲ್ಲಿ ಅಧ್ಯಾಪಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ಶೀಲ್ಡ್ ಧರಿಸಬೇಕು. ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಆರಂಭಿಸುವಂತಿಲ್ಲ ಎಂದು ಅವರು ಸೂಚಿಸಿದರು.
ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಜಾಗೃತಿ ಮೂಡಿಸುವ ಬ್ಯಾನರ್ ಮತ್ತು ಫಲಕಗಳನ್ನು ಅಳವಡಿಸಬೇಕು. ಕೋವಿಡ್ ನಿಯಂತ್ರಣ ಕುರಿತಂತೆ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಚನ ಪಡೆಯಬೇಕು. ಪ್ರತೀ ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ ರಚಿಸಬೇಕು ಎಂದರು.
ಕಾಲೇಜಿಗೆ ಬರಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಪಠ್ಯಗಳನ್ನು ಆನ್ಲೈನ್ ಮೂಲಕ ದೊರೆಯುವಂತೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತಂದು ಬಳಸಬೇಕು. ತಮ್ಮ ವಸ್ತುಗಳನ್ನು ಇತರೆ ವಿದ್ಯಾರ್ಥಿಗಳೊಂದಿಗೆ ಹಂಚಿ ಕೊಳ್ಳದಂತೆ ತಿಳಿಸಿದ ಜಿಲ್ಲಾಧಿಕಾರಿ, ಯಾವುದೇ ವಿದ್ಯಾರ್ಥಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಾಲೇಜು ವತಿಯಿಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ, ಪರೀಕ್ಷೆ ಮಾಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್ ವೈ., ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ ಹಾಗೂ ಜಿಲ್ಲೆಯ ವಿವಿಧ ಸರಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
PU colleges to reopen on November 17 in Udupi and students coming to college should appear with a permission letter from parents states DC Jagadeesh.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
20-09-24 04:42 pm
HK News Desk
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
20-09-24 05:18 pm
Mangalore Correspondent
Mangalore suicide, Doctor: ಎಂಬಿಬಿಎಸ್ ಮುಗಿಸಿದ್...
20-09-24 02:27 pm
ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಮಾಹಿತಿ ನೀಡದ ಅಧಿಕ...
19-09-24 11:12 pm
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am