ಬ್ರೇಕಿಂಗ್ ನ್ಯೂಸ್
06-11-23 11:02 pm Mangalore Correspondent ಕರಾವಳಿ
ಮಂಗಳೂರು, ನ.6: ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಬಳಕೆಗೆಂದು ಖರೀದಿಸಿದ್ದ ಇನ್ನೋವಾ ಕ್ರಿಸ್ಟಾ ಕಾರು ಬೆಂಗಳೂರಿನಲ್ಲಿ ಓಡಾಡುತ್ತಿದೆ. ಹೌದು.. ದೇವಸ್ಥಾನದ ದುಡ್ಡಿನಲ್ಲಿಯೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಈ ಕಾರು ಬಳಕೆಯಾಗುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ವಿಐಪಿಗಳ ಉಪಯೋಗಕ್ಕೆಂದು 2019ರಲ್ಲಿ ಹೊಸ ಇನ್ನೋವಾ ಕಾರನ್ನು ಖರೀದಿಸಲಾಗಿತ್ತು. ಆರಂಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೇ ಈ ಕಾರನ್ನು ಬಳಕೆ ಮಾಡುತ್ತಿದ್ದರು. ಎರಡೇ ತಿಂಗಳಲ್ಲಿ ಈ ಕಾರು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿತ್ತು. ಆಕರ್ಷಕವಾಗಿದ್ದ ಈ ಕಾರನ್ನು ತಮಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರಿನ ಇಲಾಖಾ ಆಯುಕ್ತರ ಕಚೇರಿಗೆ ಕಳುಹಿಸಿಕೊಡಲು ಸೂಚನೆ ಬಂದಿತ್ತು. ಕೂಡಲೇ ಕಳಿಸಿಕೊಡದಿದ್ದರೆ ಕ್ರಮ ಜರುಗಿಸುತ್ತೇವೆ ಎಂದು 2019ರ ಡಿಸೆಂಬರ್ 12ರಂದು ಇಲಾಖೆ ಆಯುಕ್ತರು ಬೆದರಿಸಿದ್ದರು. ಇದಕ್ಕೆ ಹೆದರಿದ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕಾರಿಗಳು ಮರುದಿನವೇ ಆ ವಾಹನವನ್ನು ಬೆಂಗಳೂರಿಗೆ ಕಳಿಸಿಕೊಟ್ಟಿದ್ದರು.


ವಿಶೇಷ ಅಂದ್ರೆ, ದೇವಸ್ಥಾನದಿಂದ ಕೊಟ್ಟಿದ್ದ ಕಾರು ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆ ಮಾಡುತ್ತಿದ್ದರೂ, ಪ್ರತಿವರ್ಷ ಇನ್ಶೂರೆನ್ಸ್, ವಾಹನ ನಿಯಮಗಳ ಉಲ್ಲಂಘನೆಗೆ ನೀಡಲಾಗುವ ದಂಡದ ಮೊತ್ತ ದೇವಸ್ಥಾನದಿಂದಲೇ ತೆರಲಾಗುತ್ತಿದೆ. ಹಲವು ಬಾರಿ ದಂಡದ ಮೊತ್ತವನ್ನು ದೇಗುಲದ ಖಾತೆಯಿಂದಲೇ ಸಂದಾಯ ಮಾಡಲಾಗಿದೆ. ಎರಡು ತಿಂಗಳಿಗೊಮ್ಮೆ 50 ಸಾವಿರ ರೂಪಾಯಿ ಮೊತ್ತವನ್ನು ಕಾರಿನ ನಿರ್ವಹಣೆ ಹಾಗೂ ಇತರ ಖರ್ಚು ಎಂದು ದೇವಸ್ಥಾನದಿಂದಲೇ ಭರಿಸಲಾಗುತ್ತಿದೆ.
ಕಾರನ್ನು ಬೆಂಗಳೂರು ಇಲಾಖೆ ಕಚೇರಿಯಲ್ಲಿ ಬಳಕೆ ಮಾಡಿ, ಅದರ ನಿರ್ವಹಣಾ ಮೊತ್ತವನ್ನು ದೇವಸ್ಥಾನದ ಖಾತೆಯಿಂದ ಭರಿಸುತ್ತಿರುವುದಕ್ಕೆ ಲೆಕ್ಕ ಪರಿಶೋಧನೆ ವೇಳೆ ಆಕ್ಷೇಪ ವ್ಯಕ್ತವಾಗಿದೆ. ಇದರಿಂದಾಗಿ ಇತ್ತೀಚೆಗೆ ಎರಡು ತಿಂಗಳಿಗೊಮ್ಮೆ ಸಲ್ಲಿಕೆಯಾಗುತ್ತಿದ್ದ ನಿರ್ವಹಣಾ ಮೊತ್ತಕ್ಕೆ ತಡೆ ಬಿದ್ದಿದೆ. ಇನ್ಶೂರೆನ್ಸ್, ದಂಡ ಸೇರಿ ಇತರೇ ಖರ್ಚನ್ನು ದೇವಳದಿಂದಲೇ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ದೇವಸ್ಥಾನದ ಸಿಇಓ ಲಿಂಗಯ್ಯ ಅವರಲ್ಲಿ ಕೇಳಿದಾಗ, ಆ ಕಾರನ್ನು ಮರಳಿ ಸುಬ್ರಹ್ಮಣ್ಯಕ್ಕೇ ಕಳಿಸುವಂತೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದ್ದಾರೆ. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡೋ ರೀತಿ ಬೆಂಗಳೂರಿನ ಅಧಿಕಾರಿಗಳು ನಾಲ್ಕು ವರ್ಷಗಳಿಂದ ದೇವಸ್ಥಾನದ ದುಡ್ಡಲ್ಲಿ ಕಾರನ್ನು ಓಡಿಸುತ್ತ ಮೆರೆದಾಡಿದ್ದಾರೆ.
Kukke Subramanya is the richest temple in the muzrai department in the state. The Innova Crysta, which was purchased four years ago for temple use, is plying in Bengaluru. Yes The car is being used for the service of officials in Bengaluru with the temple's money.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm