ಬ್ರೇಕಿಂಗ್ ನ್ಯೂಸ್
06-11-23 11:02 pm Mangalore Correspondent ಕರಾವಳಿ
ಮಂಗಳೂರು, ನ.6: ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಬಳಕೆಗೆಂದು ಖರೀದಿಸಿದ್ದ ಇನ್ನೋವಾ ಕ್ರಿಸ್ಟಾ ಕಾರು ಬೆಂಗಳೂರಿನಲ್ಲಿ ಓಡಾಡುತ್ತಿದೆ. ಹೌದು.. ದೇವಸ್ಥಾನದ ದುಡ್ಡಿನಲ್ಲಿಯೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಈ ಕಾರು ಬಳಕೆಯಾಗುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ವಿಐಪಿಗಳ ಉಪಯೋಗಕ್ಕೆಂದು 2019ರಲ್ಲಿ ಹೊಸ ಇನ್ನೋವಾ ಕಾರನ್ನು ಖರೀದಿಸಲಾಗಿತ್ತು. ಆರಂಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೇ ಈ ಕಾರನ್ನು ಬಳಕೆ ಮಾಡುತ್ತಿದ್ದರು. ಎರಡೇ ತಿಂಗಳಲ್ಲಿ ಈ ಕಾರು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿತ್ತು. ಆಕರ್ಷಕವಾಗಿದ್ದ ಈ ಕಾರನ್ನು ತಮಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರಿನ ಇಲಾಖಾ ಆಯುಕ್ತರ ಕಚೇರಿಗೆ ಕಳುಹಿಸಿಕೊಡಲು ಸೂಚನೆ ಬಂದಿತ್ತು. ಕೂಡಲೇ ಕಳಿಸಿಕೊಡದಿದ್ದರೆ ಕ್ರಮ ಜರುಗಿಸುತ್ತೇವೆ ಎಂದು 2019ರ ಡಿಸೆಂಬರ್ 12ರಂದು ಇಲಾಖೆ ಆಯುಕ್ತರು ಬೆದರಿಸಿದ್ದರು. ಇದಕ್ಕೆ ಹೆದರಿದ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕಾರಿಗಳು ಮರುದಿನವೇ ಆ ವಾಹನವನ್ನು ಬೆಂಗಳೂರಿಗೆ ಕಳಿಸಿಕೊಟ್ಟಿದ್ದರು.


ವಿಶೇಷ ಅಂದ್ರೆ, ದೇವಸ್ಥಾನದಿಂದ ಕೊಟ್ಟಿದ್ದ ಕಾರು ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆ ಮಾಡುತ್ತಿದ್ದರೂ, ಪ್ರತಿವರ್ಷ ಇನ್ಶೂರೆನ್ಸ್, ವಾಹನ ನಿಯಮಗಳ ಉಲ್ಲಂಘನೆಗೆ ನೀಡಲಾಗುವ ದಂಡದ ಮೊತ್ತ ದೇವಸ್ಥಾನದಿಂದಲೇ ತೆರಲಾಗುತ್ತಿದೆ. ಹಲವು ಬಾರಿ ದಂಡದ ಮೊತ್ತವನ್ನು ದೇಗುಲದ ಖಾತೆಯಿಂದಲೇ ಸಂದಾಯ ಮಾಡಲಾಗಿದೆ. ಎರಡು ತಿಂಗಳಿಗೊಮ್ಮೆ 50 ಸಾವಿರ ರೂಪಾಯಿ ಮೊತ್ತವನ್ನು ಕಾರಿನ ನಿರ್ವಹಣೆ ಹಾಗೂ ಇತರ ಖರ್ಚು ಎಂದು ದೇವಸ್ಥಾನದಿಂದಲೇ ಭರಿಸಲಾಗುತ್ತಿದೆ.
ಕಾರನ್ನು ಬೆಂಗಳೂರು ಇಲಾಖೆ ಕಚೇರಿಯಲ್ಲಿ ಬಳಕೆ ಮಾಡಿ, ಅದರ ನಿರ್ವಹಣಾ ಮೊತ್ತವನ್ನು ದೇವಸ್ಥಾನದ ಖಾತೆಯಿಂದ ಭರಿಸುತ್ತಿರುವುದಕ್ಕೆ ಲೆಕ್ಕ ಪರಿಶೋಧನೆ ವೇಳೆ ಆಕ್ಷೇಪ ವ್ಯಕ್ತವಾಗಿದೆ. ಇದರಿಂದಾಗಿ ಇತ್ತೀಚೆಗೆ ಎರಡು ತಿಂಗಳಿಗೊಮ್ಮೆ ಸಲ್ಲಿಕೆಯಾಗುತ್ತಿದ್ದ ನಿರ್ವಹಣಾ ಮೊತ್ತಕ್ಕೆ ತಡೆ ಬಿದ್ದಿದೆ. ಇನ್ಶೂರೆನ್ಸ್, ದಂಡ ಸೇರಿ ಇತರೇ ಖರ್ಚನ್ನು ದೇವಳದಿಂದಲೇ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ದೇವಸ್ಥಾನದ ಸಿಇಓ ಲಿಂಗಯ್ಯ ಅವರಲ್ಲಿ ಕೇಳಿದಾಗ, ಆ ಕಾರನ್ನು ಮರಳಿ ಸುಬ್ರಹ್ಮಣ್ಯಕ್ಕೇ ಕಳಿಸುವಂತೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದ್ದಾರೆ. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡೋ ರೀತಿ ಬೆಂಗಳೂರಿನ ಅಧಿಕಾರಿಗಳು ನಾಲ್ಕು ವರ್ಷಗಳಿಂದ ದೇವಸ್ಥಾನದ ದುಡ್ಡಲ್ಲಿ ಕಾರನ್ನು ಓಡಿಸುತ್ತ ಮೆರೆದಾಡಿದ್ದಾರೆ.
Kukke Subramanya is the richest temple in the muzrai department in the state. The Innova Crysta, which was purchased four years ago for temple use, is plying in Bengaluru. Yes The car is being used for the service of officials in Bengaluru with the temple's money.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm