ಬ್ರೇಕಿಂಗ್ ನ್ಯೂಸ್
07-11-23 09:19 pm Mangalore Correspondent ಕರಾವಳಿ
ಉಪ್ಪಿನಂಗಡಿ, ನ 07: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18 )ಮೃತಪಟ್ಟ ಯುವಕ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್ ಎಂದಿನಂತೆ ತರಗತಿ ಮುಗಿದು ಸಂಜೆ ಮನೆಗೆ ಬಂದಿದ್ದ.
ಸಾಯಂಕಾಲ 6 ಗಂಟೆಯ ವೇಳೆಗೆ ಇರ್ಫಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿ ಕುಸಿದು ಬಿದ್ದಾಗ ಮನೆಯವರು ತಕ್ಷಣ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ಮೃತ ಯುವಕ ತಂದೆ, ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಕೋವಿಡ್ ಲಸಿಕೆಯಿಂದ ಹಾರ್ಟ್ ಅಟ್ಯಾಕ್ ಆಗಿಲ್ಲ ಅಂತ ಕೇಂದ್ರ ಸಚಿವರು ಕೂಡ ಹೇಳಿದ್ದಾರೆ. ಆದರೆ ಈಗಾಗಲೇ ದೇಶದ 90%ರಷ್ಟು ಜನರಿಗೆ ಕೋವಿಡ್ ಬಂದಿದೆ. ಚಿಕ್ಕ ವಯಸ್ಸಿನಲ್ಲಿರುವವರಿಗೆ ಕೋವಿಡ್ ಬಂದಿರೋದು ಹೊಸದೇನಲ್ಲ. ಆದರೆ ಕೋವಿಡ್ಗೂ ಮೊದಲಿನಿಂದಲೇ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಅಭಿಪ್ರಾಯ ಪಟ್ಟಿದ್ದಾರೆ.
ಶೇ. 25ರಷ್ಟು ಯುವಕರಲ್ಲಿ ಕಾರಣಗಳಿಲ್ಲ!
ಯಂಗ್ ಹಾರ್ಟ್ ಅಟ್ಯಾಕ್ ಗ್ರೂಪ್ನಲ್ಲಿ ಶೇಕಡಾ 8ರಷ್ಟು ಮಹಿಳೆಯರಿದ್ದಾರೆ. ಶೇಕಡಾ 25ರಷ್ಟು ರೋಗಿಗಳಿಗೆ ನಿಖರವಾದ ಯಾವುದೇ ಇತರೇ ತೊಂದರೆಗಳು ಇಲ್ಲ. ಶೇಕಡಾ 25ರಷ್ಟು ಯುವಕ ರೋಗಿಗಳಲ್ಲಿ ಯಾವುದೇ ರೀಸನ್ ಇಲ್ಲ ಅಂತ ಡಾ. ಮಂಜುನಾಥ್ ಹೇಳಿದ್ದಾರೆ.
ವಾಯು ಮಾಲಿನ್ಯದಿಂದಲೂ ಹೃದಯಾಘಾತ!
ವಾಯು ಮಾಲಿನ್ಯ ಹೊಸ ಕಾರಣವಾಗಿ ಹೊರ ಹೊಮ್ಮುತ್ತಿದೆ. 2.5 ಮೈಕ್ರಾನ್ಸ್ ಗಿಂತ ಚಿಕ್ಕದಿರೋ ಕಣಗಳು ಶ್ವಾಸನಾಳದಿಂದ ಹೋಗಿ ರಕ್ತ ಕ್ಲಾಟ್ ಆಗಬಹುದು. ಫ್ರೀ ಡಯಾಬಿಟಿಸ್ ಇದ್ದವರಿಗೂ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.
ಹೃದಯಾಘಾತಕ್ಕೆ ಇವುಗಳೂ ಕಾರಣ!
ಪ್ರೀ ಡಯಾಬಿಟಿಸ್ ಇದ್ದವರಿಗೆ ಡಯಾಬಿಟಿಸ್ ಇದ್ದ ಲೆಕ್ಕವೇ. ಧೂಮಪಾನ, ಅತಿಯಾದ ಮದ್ಯಪಾನ, ಸೋಮಾರಿತನ, ಒತ್ತಡ ಇವುಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳು ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.
18 year old youth dies of heart attack in Uppinangady, Mangalore. Even air pollution reason for heart attack says Dr Manjunath.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm